ಬೆಂಗಳೂರಿಗೆ ಸರಬರಾಜಾಗುವ ಮಾದಕ ವಸ್ತುಗಳ ಮೇಲೆ ಪೊಲೀಸರಿಂದ ತೀವ್ರ ನಿಗಾ
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ರಾಜಧಾನಿ ಬೆಂಗಳೂರಿನ ಪಂಚತಾರಾ ಹೋಟೆಲ್ ಗಳು ಕ್ಲಬ್ ಗಳು ರೆಸಾರ್ಟ್ ಸೇರಿದಂತೆ ಮನರಂಜನಾ ತಾಣಗಳು ಅದ್ದೂರಿ ಸಿದ್ಧತೆಯಲ್ಲಿ ತೊಡಗಿವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನ ಖ್ಯಾತನಾಮರ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಪಾರ್ಟಿ ಆಸಕ್ತರಿಗೆ ವಿಶೇಷ ಆಕರ್ಷಣೆಗಳ ಮೂಲಕ ಸೆಳೆಯಲು ಸಿದ್ಧತೆಗಳನ್ನು ನಡೆಸಲಾಗಿದೆ.
ಇದರ ನಡುವೆ ರೇವ್ ಪಾರ್ಟಿ ಹೆಸರಿನಲ್ಲಿ ಡ್ರಗ್ಸ್ ಪಾರ್ಟಿಗಳು ಕೂಡ ಆಯೋಜನೆಯಾಗುತ್ತಿವೆ ಎಂಬ ಮಾಹಿತಿ ಗುಪ್ತದಳದ ಮೂಲಕ ಪೊಲೀಸರನ್ನು ತಲುಪಿದೆ ಹೀಗಾಗಿ ಬೆಂಗಳೂರಿಗೆ ಸರಬರಾಜಾಗುವ ಮಾದಕ ವಸ್ತುಗಳ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹೊಸ ವರ್ಷದ ಸಂಭ್ರಮಕ್ಕಾಗಿ ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಅವರಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ, ಕಾರು ಹಾಗೂ ಮೂರು ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಜಕ್ಕೂರಿನ ಶ್ರೀರಾಂಪುರದ ರೇಷ್ಮಾ(28), ಜಮೀರ್ ಖಾನ್ (29) ಹಾಗೂ ಕೇರಳದ ಕೊಟ್ಟಾಯಂ ಜಿಲ್ಲೆಯ ಅಚ್ಚು ಸಂತೋಷ್ (28)ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗೋವಿಂದಪುರದ ಹೆಚ್ ಬಿಆರ್ ಲೇಔಟ್ನಲ್ಲಿ ಬಂಧಿತ ಆರೋಪಿಗಳು ಗಾಂಜಾವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ ಎಂದರು.
ಆರೋಪಿಗಳು ಒಡಿಶಾ ಮತ್ತು ಆಂಧ್ರ ರಾಜ್ಯಗಳಿಂದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಲಾಭಕ್ಕಾಗಿ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾರೆ. ಬಂಧಿತರು ಚೀಲಗಳಲ್ಲಿ ತುಂಬಿಟ್ಟಿದ್ದ 318 ಕೆ.ಜಿ ಗಾಂಜಾ, ಕಾರು, 3 ಮೊಬೈಲ್ ಗಳು ಸೇರಿ 3.25 ಕೋಟಿ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದರು.




