ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದರು.
ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ ಎಂದರು.
ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. ಸ್ಪೀಕರ್ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದರು.




