ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದರು.
ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ ಎಂದರು.
ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. ಸ್ಪೀಕರ್ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದರು.



