ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತು ಬಿಜೆಪಿಯ ಎಲ್ಲ ಚುನಾಯಿತ ಪ್ರತಿನಿಧಿಗಳೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಬೆಂಗಳೂರಿನಲ್ಲಿ ಅಗರ್ವಾಲ್ ಸಭೆ ನಡೆಸುತ್ತಿದ್ದಾರೆ. ಈ ಸಭೆಯಿಂದ ದೂರ ಉಳಿದ ಸೋಮಶೇಖರ್ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಜೈ ಬಾಪು ಸಮ್ಮೇಳನದಲ್ಲಿ ಪಾಲ್ಗೊಂಡರು.
ಸಮಾವೇಶದಲ್ಲಿ ಪಾಲ್ಗೊಂಡ ಎಸ್. ಟಿ. ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಸರ್ಕಾರದ ಆಹ್ವಾನವಿತ್ತು. ಮಹಾತ್ಮ ಗಾಂಧಿ ಅವರ ಅನುಯಾಯಿಯಾಗಿ, ಒಬ್ಬ ಶಾಸಕನಾಗಿ ನನ್ನ ಕರ್ತವ್ಯ ಇದಕ್ಕೆ ಗೌರವ ಕೊಡುವುದು. ಆದ್ದರಿಂದ ಬೆಂಗಳೂರಿನಿಂದ ಈ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ ಎಂದರು.
ಯಾರಿಗೆ ಮಹಾತ್ಮ ಗಾಂಧಿ ಅವರ ಮೇಲೆ ಗೌರವವಿದೆ ಅವರು ಇಂತಹ ಕಾರ್ಯಕ್ರಮಗಳಿಗೆ ಬರಬೇಕು, ನಾನು ಬಂದಿದ್ದೇನೆ. ನಾನು ಮೂಲ ಕಾಂಗ್ರೆಸಿಗ, ಗಾಂಧಿ ಅನುಯಾಯಿ. ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು.




