ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕರೆನೀಡಿದರು.
- Modi is confident that he can capture the Delimitation Commission too: Rahul GandhiOne of the BJP’s dangerous plans is to “gerrymander” all Lok Sabha seats to its advantage for the 2029 elections. The proposed Bills remove all Constitutional safeguards on delimitation, giving full power to the Delimitation Commission which the govt itself will appoint and direct. We have seen how BJP does this – it hijacked delimitation… Read more: Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮತ್ತು ಕನ್ನಡದ ಲೇಖಕರೂ ಆಗಿರುವ ನಿತ್ಯಾನಂದ ಬಿ ಶೆಟ್ಟಿಯವರು ಒಂದು ಅದ್ಭುತವಾದ ಪುಸ್ತಕ ಬರೆದಿದ್ದಾರೆ.ಆ ಕೃತಿಯ ಹೆಸರು ಆಳವು ಅರಿಯದ ಭಾಷೆ – ಕಲೆ,ಸಮಾಜ, ಇತಿಹಾಸ. ಒಂದು ಕಾದಂಬರಿಯಂತೆ, ಕುತೂಹಲ ಹುಟ್ಟಿಸುತ್ತ ಓದಿಸಿಕೊಂಡು ಹೋಗುವ ಇಂತಹ ಒಂದು ಸಂಶೋಧನಾ ಕೃತಿ ಕನ್ನಡದಲ್ಲಂತೂ ಪ್ರಾಯಶಃ ಇದೇ ಮೊದಲು. ಓದು-ಬರಹ ಬಲ್ಲ ಸಾಮಾನ್ಯರಿಂದ ತೊಡಗಿ, ಮಹಾನ್ ಪಂಡಿತರನ್ನೂ ಏಕಕಾಲಕ್ಕೆ ಆವರಿಸಬಲ್ಲ ಪುಸ್ತಕ ಇದು. ಈ ಪುಸ್ತಕದ ಪ್ರತಿಯೊಂದು ಪದ, ಪ್ರತಿ ಸಾಲು ಓದುಗರನ್ನು ಹೇಗೆ ಹಿಡಿದಿಡುತ್ತದೆಯೆಂದರೆ ಇದನ್ನು… Read more: ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯಬೆಂಗಳೂರು: ನಮ್ಮ ಶಿಕ್ಷಣ ಕೇವಲ ಬದುಕುವ ದಾರಿಯಾಗಬಾರದು. ಅದರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಪ್ರಖ್ಯೂತ ಮಾನವೀಯತೆ ಇರಬೇಕು. ಈ ಗುಣಗಳಿಲ್ಲದ ಶಿಕ್ಷಣಕ್ಕೆ ಅರ್ಥವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕರ್ನಾಟಕದ ಬಹುಮುಖ ಪರಂಪರೆಯನ್ನು ಬಿಂಬಿಸುವ ‘ಕನ್ನಡ ಸಾಮರಸ್ಯ ನೆಲೆಗಳು’ ಸರಣಿಯ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಗುರಿಯಿದ್ದು, ಇಂದು ಬಿಡುಗಡೆಯಾದ ಕೃತಿಗಳಲ್ಲದೆ ಇನ್ನುಳಿದ 59 ಪುಸ್ತಕಗಳು ಶೀಘ್ರದಲ್ಲೇ ಓದುಗರ ಕೈ… Read more: ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡಬೆಂಗಳೂರು: ಜೀವನೋಪಾಯಕ್ಕಾಗಿ ಪರ ರಾಜ್ಯಗಳಿಗೆ ವಲಸೆ ಹೋಗುವವರು ಆ ಮಣ್ಣಿನ ಭಾಷೆ ಕಲಿಯುವುದು ಮೂಲಭೂತ ಕರ್ತವ್ಯ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಂಡಿರುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕವೂ ತಕ್ಷಣ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾರಾಷ್ಟ್ರದ ‘ಧೈರ್ಯದ’ ನಿರ್ಧಾರಕ್ಕೆ ಸ್ವಾಗತಿಸಿದ್ದು, ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ… Read more: ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿಬೆಂಗಳೂರು: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬುದ್ಧನ ಪ್ರೇರಣೆ ಮತ್ತು ಬಸವಣ್ಣನ ಸಮಾನತೆಯ ಮೌಲ್ಯಗಳನ್ನು ಒಳಗೊಂಡ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತಕ್ಕೆ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದ ಮಹಾನಾಯಕರು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ, ನಮ್ಮ ಸಂವಿಧಾನ ಸರ್ವಸ್ಪರ್ಶಿ ಮತ್ತು… Read more: ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ಮಾಹಿತಿ ನೀಡಿದರು.
ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.
ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.
ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.
ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದರು.




