ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕರೆನೀಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?ಕಾಂಗ್ರೆಸ್ ಮುಕ್ತ ಭಾರತವೇ? ಅಥವಾ ಕಮ್ ಬ್ಯಾಕ್ ಹಾದಿಯೇ? ಒಂದು ಅವಲೋಕನ! ಭಾರತೀಯ ರಾಜಕಾರಣದಲ್ಲಿ ಅತ್ಯಂತ ದೀರ್ಘ ಇತಿಹಾಸ ಹೊಂದಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪ್ರಸ್ತುತ ದೇಶದಾದ್ಯಂತ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಮತ್ತು ಮರಳಿ ಪಡೆಯಲು ತೀವ್ರ ಹೋರಾಟ ನಡೆಸುತ್ತಿದೆ. ಒಂದು ಕಾಲದಲ್ಲಿ ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಏಕಸ್ವಾಮ್ಯ ಹೊಂದಿದ್ದ ಕಾಂಗ್ರೆಸ್, ಇಂದು ಹಲವು ರಾಜ್ಯಗಳಲ್ಲಿ ದಶಕಗಳಿಂದ ಅಧಿಕಾರದಿಂದ ದೂರ ಉಳಿದಿದೆ. ಇತ್ತೀಚಿನ ವರ್ಷಗಳಲ್ಲಿ ಕೆಲವು ರಾಜ್ಯಗಳಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದ್ದರೂ, ಉತ್ತರ… Read more: ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆಕರ್ನಾಟಕದ ಮುಖ್ಯಮಂತ್ರಿಯಾಗಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿದ ದಾಖಲೆಯೊಂದಿಗೆ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು, ಸೈದ್ಧಾಂತಿಕ ನಿಲುವುಗಳು, ರಾಜಕೀಯ ಹೋರಾಟಗಳಿಂದ ರಾಜ್ಯದ ಜನತೆಯ ಪ್ರೀತಿಗೆ ಪಾತ್ರರಾದವರು ಶ್ರೀ ಸಿದ್ದರಾಮಯ್ಯ ಅವರು. ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಸಂವಿಧಾನದ ಮೌಲ್ಯಗಳು, ಜಾತ್ಯತೀತ ಹಾಗೂ ಸಮಾಜವಾದಿ ತತ್ವಗಳಿಗೆ ಬದ್ಧರಾಗಿ, ಪ್ರಬುದ್ಧ ರಾಜಕಾರಣಕ್ಕೆ ಮೇಲ್ಪಂಕ್ತಿ ಹಾಕಿದರು. ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸ್ಫೂರ್ತಿ ಅವರು. ನನ್ನ ವೈಯಕ್ತಿಕ ರಾಜಕೀಯ ಬದುಕಿನಲ್ಲಿ, ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಬಹುಮುಖ್ಯ ಪಾತ್ರವಹಿಸಿದೆ.… Read more: ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?* ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ. * ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ. * ದಶಕಗಳ… Read more: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್ನಿರ್ಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಐವತ್ತು ವರ್ಷಗಳ ರಾಜಕೀಯ ಜೀವನದ ಸಾಧಕ ಬಾಧಕಗಳು, ಮುಖ್ಯಮಂತ್ರಿಯಾಗಿ ಮೊದಲ ಮತ್ತು ಎರಡನೇ ಅವಧಿಯ ಸಾಧನೆ ಮತ್ತು ವೈಫಲ್ಯ ಎಲ್ಲವನ್ನೂ ಮುಂದಿನ ದಿನಗಳಲ್ಲಿ ತೌಲನಿಕವಾಗಿ ಚರ್ಚಿಸಬಹುದು. ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ನಂಬಿಕೆ ಇರುವ ಸಿದ್ದರಾಮಯ್ಯ ಇದರಲ್ಲಿ ಸ್ವತಃ ಮುಕ್ತವಾಗಿ ಭಾಗವಹಿಸುತ್ತಾರೆ ಎನ್ನುವ ನಂಬಿಕೆಯಿದೆ. ಜನಪರ ಕಾಳಜಿಯನ್ನು ಮೈಗೂಡಿಸಿಕೊಂಡಿದ್ದ ಸಿದ್ದರಾಮಯ್ಯ ಕರ್ನಾಟಕದ ಸೋಶಿಯಲ್ ಇಂಜಿನಿಯರಿಂಗ್ ನ ಆಳ ಅಗಲ ಬಲ್ಲವರಾಗಿದ್ದರು. ಆದರೆ ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಇಲ್ಲಿ ಆರಕ್ಕೇರಬಹುದಾಗಿತ್ತು, ಆದರೆ ಮೂರಕ್ಕೆ… Read more: ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ಮಾಹಿತಿ ನೀಡಿದರು.
ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.
ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.
ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.
ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದರು.




