ದಾವಣಗೆರೆ: ಕೇಂದ್ರೀಯ ಸೈನಿಕ ಮಂಡಳಿಯಿಂದ ಪಡೆಯುತ್ತಿರುವ ಅಂಗವಿಕಲ ಮಕ್ಕಳ ಅನುದಾನ ಹಾಗೂ ಅನಾಥ ಮಕ್ಕಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪ್ರಸಕ್ತ ಸಾಲಿನ ಅನುದಾನ ನವೀಕರಣಕ್ಕಾಗಿ ಜೀವಿತ ಪ್ರಮಾಣ ಪತ್ರವನ್ನು ಡಿ.1 ರಿಂದ ಮಾರ್ಚ್ 2025 ರೊಳಗಾಗಿ ಸಲ್ಲಿಸಬೇಕು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಮೂಲ ದಾಖಲೆಗಳೊಂದಿಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ದೂ.ಸಂ:08182-220925 ನ್ನು ಸಂಪರ್ಕಿಸಲು ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.




