ಬೆಂಗಳೂರು: ಗುಣಪಡಿಸಲಾಗದ ಮಾರಣಾಂತಿಕ ರೋಗಗಳಿಂದ ನರಳುತ್ತಿರುವ ರೋಗಿಯು ಘನತೆಯಿಂದ ಸಾಯುವ ಹಕ್ಕು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಈ ಕುರಿತ ಸುತ್ತೋಲೆಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು ನ್ಯಾಯಾಲಯಗಳ ಆದೇಶಗಳಿಗೆ ಗೌರವ ನೀಡಿ ಅದನ್ನು ಚಾಚು ತಪ್ಪದೇ ಪಾಲಿಸುತ್ತಿದೆ ಎಂದಿದ್ದಾರೆ.
ಮಾರಣಾಂತಿಕ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಘನತೆಯಿಂದ ಸಾವಿನ ಹಕ್ಕನ್ನು ಚಲಾಯಿಸಲು ಅವಕಾಶ ನೀಡುತ್ತದೆ. ಇದಕ್ಕಾಗಿ ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಅನ್ನು ಸಹ ಹೊರತಂದಿದೆ. ಇದರಲ್ಲಿ ರೋಗಿ ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು ಎಂದಿದ್ದಾರೆ.




