ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅಸಹಜ ನಡವಳಿಕೆಗಳ ಬಗ್ಗೆ ಸಂತ್ರಸ್ತ ಯುವಕರು ಬಹಿರಂಗ ಪಡಿಸಿರುವ ಮಾಹಿತಿ ಬೆಚ್ಚಿ ಬೀಳುವಂತಿವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸೂರಜ್ ರೇವಣ್ಣ ಅವರದ್ದು ದ್ವಿಮುಖ ವ್ಯಕ್ತಿತ್ವ. ಅವರು ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ವಿರುದ್ಧವಾಗಿ ಒಳಗಡೆ ಇರುತ್ತಾರೆ. ಸೂರಜ್ ರೇವಣ್ಣ ಕಾಮುಕ, ಹೊರಗೆ ಒಂದು ಮುಖ, ಒಳಗೆ ಇನ್ನೊಂದು ಮುಖ ಎಂದು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.
ಅಮವಾಸ್ಯೆ ಮತ್ತು ಹುಣ್ಣಿಮೆಯಂದು ಸೀರೆ ಉಟ್ಟು, ಬಳೆತೊಡುವ ಸೂರಜ್ ಹಣೆ ಮೇಲೆ ಢಾಳಾಗಿ ಕುಂಕುಮ, ಹರಿಶಿನ ಹಚ್ಚಿಕೊಂಡು ಯಾವುದೋ ದೇವರ ಪೂಜೆ ಮಾಡುತ್ತಾರೆ. ಅವರ ವ್ಯಕ್ತಿತ್ವವೇ ಅತ್ಯಂತ ವಿಚಿತ್ರವಾಗಿದೆ ಎಂದು ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ.
ಹಗಲಿನ ವೇಳೆ ಎಲ್ಲರ ಸಮ್ಮುಖದಲ್ಲಿ ಅತ್ಯಂತ ಸಾಮಾನ್ಯ ವ್ಯಕ್ತಿಯಂತೆ ಸಹಜ ನಡವಳಿಕೆ ಹೊಂದಿರುತ್ತಿದ್ದ ಸೂರಜ್ ರೇವಣ್ಣ ರಾತ್ರಿ ವೇಳೆಯಲ್ಲಿ ಒಂಟಿಯಾಗಿದ್ದ ಸಮಯದಲ್ಲಿ ಅತ್ಯಂತ ವಿಚಿತ್ರವಾಗಿ ವರ್ತಿಸುತ್ತಾರೆ. ಈ ವೇಳೆ ಯಾರಾದರೂ ಹುಡುಗರು ಸಿಕ್ಕರಂತೂ ಅವರ ವರ್ತನೆ ಹೇಳಲು ಅಸಾಧ್ಯ ಎಂದು ತಿಳಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.




