ಬಳ್ಳಾರಿ: ಸಮುದಾಯದಲ್ಲಿ ದೊಡ್ಡ ಮಟ್ಟದ ಜಾತ್ರೆ, ಊರು ಹಬ್ಬ, ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದಂತೆ ಇಲಾಖೆಯ ಜೊತೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬಳ್ಳಾರಿ ತಾಲ್ಲೂಕಿನ ಕರ್ಲಗುಂದಿ ಗ್ರಾಮದಲ್ಲಿ ಕುಂಭೋತ್ಸವ ಹಿನ್ನಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆಯ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಿ ಸಾರ್ವಜನಿಕರೊಂದಿಗೆ ಮಾತನಾಡಿದರು.
ಜಾತ್ರೆ, ಊರ ಹಬ್ಬ ಮತ್ತು ಧಾರ್ಮಿಕ ಆಚರಣೆಗಳು ಸಮಾಜದ ಭಾಗವಾಗಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನ ಸೇರುವುದರಿಂದ ಜನತೆಯು ಕುಡಿಯಲು ಶುದ್ಧ ನೀರು ಬಳಸುವುದು ಹಾಗೂ ಆಹಾರ ಸಿದ್ಧಪಡಿಸುವ ಸ್ಥಳದಲ್ಲಿ ಶುಚಿತ್ವ ಕಾಪಾಡುವುದು. ಆಹಾರ ತ್ಯಾಜ್ಯವನ್ನು ಆಯಾ ಗ್ರಾಮ ಪಂಚಾಯಿತಿಯ ನಿರ್ದೇಶನದಂತೆ ಸೂಕ್ತ ಸ್ಥಳದಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರೂ ಹೊಂದಬೇಕು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಅವರ ನೇತೃತ್ವದ ಜಿಲ್ಲಾ ಕಾಲರಾ ನಿಯಂತ್ರಣ ತಂಡ ಗ್ರಾಮದ ನೀರು ಸರಬರಾಜು ವ್ಯವಸ್ಥೆಯ ಮೂಲಗಳು, ನೀರಿನ ಸಂಗ್ರಹಾರಕಗಳು, ನಳಗಳು, ಪೈಪ್ಲೈನ್ ಸೇರಿದಂತೆ ಓವರ್ಹೆಡ್ ಟ್ಯಾಂಕ್, ಶುದ್ಧ ನೀರಿನ ಘಟಕ ಮುಂತಾದವುಗಳಲ್ಲಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ಶುದ್ದ ಕುಡಿಯುವ ನೀರನ್ನೇ ಸರಬರಾಜು ಮಾಡಲಾಗುತ್ತಿದ್ದು, ಜನರು ಶುದ್ಧೀಕರಿಸಿದ ನೀರು ಕುಡಿಯಲು ಆದ್ಯತೆ ನೀಡಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿ, ತೆರೆದಿಟ್ಟ ಆಹಾರ ಪದಾರ್ಥ, ರಸ್ತೆಯ ಅಕ್ಕಪಕ್ಕ ಕೊಯ್ದ ಹಣ್ಣು ಹಂಪಲಗಳನ್ನು ತಿನ್ನಬಾರದು. ಶೌಚದ ನಂತರ ಮತ್ತು ಊಟದ ಮೊದಲು ಹಾಗೂ ತಾಯಂದಿರು ಅಡುಗೆ ಮಾಡುವ ಮೊದಲು ತಪ್ಪದೇ ಕೈಗಳನ್ನು ಸಾಬೂನುನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಎಂದು ಹೇಳಿದರು.
ಕುಡಿಯುವ ನೀರನ್ನು ಕುದಿಸಿ ಆರಿಸಿ, ಸೋಸಿ ಕುಡಿಯಬೇಕು. ನೀರಿನ ಸಂಗ್ರಹಕಗಳ ಮೇಲೆ ಮುಚ್ಚಳ ಮುಚ್ಚಬೇಕು. ಮನೆಯ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಲ ಮೂತ್ರ ವಿಸರ್ಜನೆಗೆ ಶೌಚಾಲ ಬಳಸಬೇಕು. ತಿನ್ನುವ ಆಹಾರ ಪದಾರ್ಥಗಳ ಮೇಲೆ ನೊಣ ಕೂರದಂತೆ ಜಾಗ್ರತೆ ವಹಿಸಬೇಕು. ತಂಗಳ (ಹಳಸಿದ) ಆಹಾರ ಸೇವಿಸಬಾರದು. ಗ್ರಾಮಗಳಲ್ಲಿ ವೈದ್ಯಕೀಯ ತಂಡ ಭೇಟಿ ನೀಡಿ ಜನತೆಗೆ ಆರೋಗ್ಯ ಶಿಕ್ಷಣ ನೀಡುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ವೈದ್ಯಾಧಿಕಾರಿಗಳಾದ ಡಾ.ಇರ್ಫಾನ್, ಡಾ.ರಾಜಶೇಖರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಬಿಹೆಚ್ಇಒ ಶಾಂತಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮುಸ್ತಾಕ್ ಅಹಮ್ಮದ್, ಹೆಚ್ಐಒ ಷಣ್ಮುಖಪ್ಪ, ನೀಲಕಂಠಪ್ಪ, ಮಲ್ಲಿಕಾರ್ಜುನ, ಸಿಹೆಚ್ಒ ಮೇರಿ, ಮೌನಿಕ, ಮುತ್ತಮ್ಮ, ಪಿಹೆಚ್ಸಿಒ ಸುವರ್ಣ, ಅರುಣ ಜ್ಯೋತಿ ಸೇರಿದಂತೆ ಸಾರ್ವಜನಿಕರು ಮತ್ತು ಇತರರು ಹಾಜರಿದ್ದರು.




