ಹಾಸನ: ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ, ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ಬಡ ಮಕ್ಕಳಿಗೂ ಸಹ ಪ್ರತಿಭಾ ಪುರಸ್ಕಾರವನ್ನು ಮಾಡಬೇಕು ಎಂದು ಶಾಸಕ ಸ್ವರೂಪ್ ಪ್ರಕಾಶ್ ಕರೆನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ನೋಂ) ವತಿಯಿಂದ ನಗರದ ಜಿಲ್ಲಾ ನಿವೃತ್ತ ನೌಕರರ ಸಮುದಾಯ ಭವನದಲ್ಲಿಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಶಾಸಕ ಹೆಚ್.ಎಸ್ ಪ್ರಕಾಶ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ತಂದೆಯವರನ್ನು ನೆನೆಸಿಕೊಂಡು ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದು ಮಗನಾಗಿ ನನಗೆ ಬಹಳ ಸಂತೋಷವಾಗುತ್ತಿದೆ ಎಂದರು.
ಕಳೆದ ಎರಡು ವರ್ಷಗಳ ಹಿಂದೆ ಶಾಸಕನಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಬಂದಾಗ ಕಟ್ಟಡ ದುಸ್ಥಿತಿಯಲ್ಲಿದೆ ಅದನ್ನು ಸರಿಪಡಿಸಿಕೊಡಬೇಕು ಎಂದು ಕೆಲವು ಬೇಡಿಕೆಗಳನ್ನು ಇಟ್ಟಿದ್ದರು. ಅದನ್ನು ಖಂಡಿತವಾಗಿಯೂ ಸರಿಪಡಿಸಿ ಕೊಡುವಂತಹ ಕೆಲಸವನ್ನು ಮಾಡುತ್ತೇನೆ ಎಂದರು.




