ಬೆಂಗಳೂರು: ವಾಟ್ಸಾಪ್ ನಲ್ಲಿ ಬಂದ ಆಕರ್ಷಕ ಸಂದೇಶ ನಂಬಿ ಸುಲಭವಾಗಿ ವಂಚಕರ ಜಾಲಕ್ಕೆ ಬಿದ್ದ ಸಾಫ್ಟ್ ವೇರ್ ಇಂಜಿನಿಯರ್ ಹಾಗೂ ಖಾಸಗಿ ಸಂಸ್ಥೆಯ ಉದ್ಯೋಗಿ ಸೇರಿ ಇಬ್ಬರು ಕೊಟ್ಯಾಂತರ ರೂಪಾಯಿ ಹಣ ಕಳೆದುಕೊಂಡು ಇಂಗು ತಿಂದ ಮಂಗನಂತೆ ಆಗಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಅತ್ಯಂತ ಕಡಿಮೆ ಅವಧಿಯಲ್ಲಿ ಭಾರಿ ಮೊತ್ತದ ಹಣ ಸಂಪಾದಿಸಬಹುದು ಎಂದು ಹೇಳಿದ ವಾಟ್ಸಾಪ್ ಸಂದೇಶ ನಂಬಿದ ಈ ಇಬ್ಬರೂ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ 2.28 ಕೋಟಿ ರೂ.ಗಳನ್ನು ಕಳೆದುಕೊಂಡು ನಗರ ಪೊಲೀಸರು ಮೊರೆ ಹೋಗಿದ್ದಾರೆ. ಕಳೆದ 2 ವಾರಗಳಲ್ಲಿ ಪೂರ್ವ ಸೈಬರ್ ಕ್ರೈಮ್ ಪೊಲೀಸರು ಈ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ರಾಮಮೂರ್ತಿ ನಗರದ ರಾಮನಾಥ್ ಎಸ್ (45) ಸೈಬರ್ ಅಪರಾಧ ಪ್ರಕರಣದಲ್ಲಿ 1.40 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ. ವರ್ಷದ ರಾಮನಾಥ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 10 ವರ್ಷದಿಂದ ಒಂದು ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರು. ಆದರೆ ಈಗ ಕೋಟಿಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಕಳೆದ 2024 ಡಿಸೆಂಬರ್ನಲ್ಲಿ ವಾಟ್ಸಾಪ್ ಮೂಲಕ ರಾಣಿ ಸಾಹ ಎಂಬ ಮಹಿಳೆಯ ಪರಿಚಯವಾಗಿತ್ತು.
ಆಕೆ ತಾನು ಆನ್ಲೈನ್ ಹೂಡಿಕೆಗಳ ಮೂಲಕ ಕೊಟ್ಯಾಧಿಪತಿಯಾಗಿದ್ದೇನೆ ಎಂದು ಮೆಸೇಜ್ನಲ್ಲಿ ತಿಳಿಸಿದ್ದಳು. ಆನಂತರ ರಾಮನಾಥರನ್ನು ಒಂದು ವಾಟ್ಸಾಪ್ ಗ್ರೂಪ್ನಲ್ಲಿ ಸೇರಿಸಲಾಯಿತು. ಅಲ್ಲಿಂದ ರವಿಕುಮಾರ್ ಎನ್ನುವವರ ಪರಿಚಯವಾಗಿತ್ತು. ಕೆಲಸದ ಮೇಲೆ ಯು.ಕೆಗೆ ಹೋದಾಗ ಕುಮಾರ್ ಇವರ ಮನವೊಲಿಸಿ 10 ಸಾವಿರ ರೂ.ಗಳ ಹೂಡಿಕೆ ಮಾಡಿಸಿದ್ದರಿಂದ ಅದರಿಂದ ಸಣ್ಣ ಸಣ್ಣ ಲಾಭಗಳು ಸಿಗಲು ಶುರುವಾದ ಮೇಲೆ ಈ ಯೋಜನೆಯನ್ನು ರಾಮನಾಥ ಸಂಪೂರ್ಣವಾಗಿ ನಂಬಿದ್ದರು.
ನಂತರ ಕ್ಯಾಂಬ್ರಿಡ್ಜ್ ಯೂನಿವರ್ಸಿಟಿಯ ದಿವಾಕರ್ ಎನ್ನುವವರನ್ನು ಇವರಿಗೆ ಪರಿಚಯಿಸಲಾಯಿತು. ಹೀಗೆ ಅವರು 10 ತಿಂಗಳ ಕಾಲ ಅವರ ಖಾತೆಗೆ ಹಣವನ್ನು ವರ್ಗಾಯಿಸುತ್ತಿದ್ದರು. ಇದರಿಂದ ಬರೋಬ್ಬರಿ 1,40,14,197 ರೂ.ಗಳನ್ನು ವರ್ಗಾಯಿಸಿದ್ದರು. ಹೂಡಿಕೆಯ ಲಾಭ ಪಡೆಯಲು ಹೋದಾಗಲೆಲ್ಲ ಸರ್ವಿಸ್ ಚಾರ್ಜ್ ಹೆಸರಿನಲ್ಲಿ 5% ಹಣವನ್ನು ಪಾವತಿಸಲು ಹೇಳುತ್ತಿದ್ದರು. ಇದರಿಂದ ಶಂಕೆಗೊಳಗಾದ ರಾಮನಾಥ್ ತಮ್ಮ ಸ್ನೇಹಿತರೊಂದಿಗೆ ಮಾತನಾಡಿ ತಾನು ಎಷ್ಟು ದೊಡ್ಡ ಹಗರಣದಲ್ಲಿ ಸಿಲುಕಿದ್ದೇನೆ ಎಂದು ತಿಳಿದುಕೊಂಡರು.
ಖಾಸಗಿ ಸಂಸ್ಥೆಯ ಉದ್ಯೋಗಿ ಸನತ್ ಪಿ (ಹೆಸರು ಬದಲಾಯಿಸಲಾಗಿದೆ) ಬಾಣಸವಾಡಿಯ ನಿವಾಸಿ. 2025 ರ ಜೂನ್ನಿಂದ ಸೆಪ್ಟೆಂಬರ್ ತಿಂಗಳಿನ ಅಂತರದಲ್ಲಿ 88.36 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ತಾನು ಒಂದು ಸೆಬಿ- ರಿಜಿಸ್ಟರ್ಡ್ ಕಂಪನಿಯಾದ ಓಡೊಮ್ಯಾಕ್ಸ್/ಒಪೆನಹೈಮರ್ ಎಂಬಲ್ಲಿ ಹೂಡಿಕೆ ಮಾಡುತ್ತಿದ್ದೇನೆಂದು ಭಾವಿಸಿ ಮೋಸಹೋಗಿದ್ದಾರೆ.
ಸೈಬರ್ ಅಪರಾಧಿಗಳು ಇವರೊಂದಿಗೆ ಒಂದು ನಕಲಿ ಟ್ರೇಡಿಂಗ್ ಆ್ಯಪ್ ಒಂದನ್ನು ಹಂಚಿಕೊಂಡಿದ್ದರು. ಅದನ್ನು ಡೌನ್ಲೊಡ್ ಮಾಡಿಕೊಂಡ ಸನತ್, ನಿರಂತರ ಹೂಡಿಕೆ ಮಾಡಿದ್ದಾರೆ. ಅವರ ಕಣ್ಣು ಕಟ್ಟಲು ಅವರ ಹೂಡಿಕೆಯು ಬೆಳೆಯುತ್ತಿರುವುದನ್ನೂ ಆ ನಕಲಿ ಆ್ಯಪ್ನಲ್ಲಿ ತೋರಿಸಲಾಗಿತ್ತು. 8.40 ಲಕ್ಷ ಹಣವನ್ನು ತನ್ನ ಸಂಬಂಧಿಯೊಬ್ಬರಿಂದ ಪಡೆದು ಹೂಡಿಕೆಮಾಡಿ ಕೇವಲ 50 ಸಾವಿರ ರೂ.ಗಳನ್ನಷ್ಟೇ ಹಿಂಪಡೆದಿದ್ದರು. ಹಲವಾರು ಬಾರಿ ಹಣ ಹಿಂಪಡೆಯುವಲ್ಲಿ ವಿಫಲರಾದಾಗ ಇದು ಸೈಬರ್ ವಂಚನೆಯೆಂದು ತಿಳಿದುಬಂದಿದೆ. ರಾಮನಾಥ್ ಮತ್ತು ಸನತ್ ಇಬ್ಬರೂ ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಇಬ್ಬರ ಬ್ಯಾಂಕ್ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.



