ಬೆಂಗಳೂರು: ಡಿ4ಎ ಶಿಕ್ಷಣ ಪ್ರತಿಷ್ಠಾನ ಚೊಚ್ಚಲ ಎಜುಕೇಟರ್ಸ್ ಗಿಲ್ಡ್ ಅವಾರ್ಡ್ಸ್ (ಟಿಇಜಿಎ) ಪ್ರಶಸ್ತಿ ಪ್ರದಾನ ಮಾಡುವ ಸಲುವಾಗಿ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಹಾಗೂ ವಿದ್ಯಾರ್ಥಿಗಳ ಬದುಕಿನ ಮೇಲೆ ಗಾಢ ಪರಿಣಾಮ ಬೀರಿದ ಬೆಂಗಳೂರಿನ ಶ್ರೇಷ್ಠ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಸಮಾರಂಭದಲ್ಲಿ ಶಿಕ್ಷಾ ರತ್ನ ಪ್ರಶಸ್ತಿ ಸ್ವೀಕರಿಸಿದ ಶಿಕ್ಷಣ ಕ್ಷೇತ್ರದಲ್ಲಿ 35 ವರ್ಷಗಳ ಅನುಭವ ಹೊಂದಿರುವ ಇನ್ಸೈಟ್ ಅಕಾಡೆಮಿಯ ಸಂಸ್ಥಾಪಕಿ ಮೇ ರೂತ್ ಡಿಸೋಜಾ ಅವರು, “ನಾನು ನನ್ನ ಜೀವಮಾನದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸೌಭಾಗ್ಯ ಹೊಂದಿದ್ದೇನೆ. ನನ್ನ ಈ ಕೆಲಸಕ್ಕೆ ಸಂದಿರುವ ಈ ಪ್ರಶಸ್ತಿಯನ್ನು ಆದರಪೂರ್ವಕವಾಗಿ ಸ್ವೀಕರಿಸುತ್ತಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದರು.

ಎಜುಕೇಟರ್ಸ್ ಗಿಲ್ಡ್ ಪ್ರಶಸ್ತಿ ಕುರಿತು ಮಾತನಾಡಿದ ಡಿ4ಎ ಎಜುಕೇಷನ್ ಫೌಂಡೇಶನ್ ನ ಟ್ರಸ್ಟಿ ಎ. ನಾರಾಯಣನ್, ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಶ್ರೇಷ್ಠ ಶಿಕ್ಷಕ ಸಮುದಾಯದ ಅತ್ಯದ್ಭುತ ಪ್ರತಿಭೆಯನ್ನು ತೋರಿಸಿಕೊಟ್ಟಿದೆ. ಯುವಜನರ ಮೇಲೆ ಪ್ರಭಾವ ಬೀರುವ ಶಿಕ್ಷಕರ ಮಹತ್ವವನ್ನು ಟಿಇಜಿಎ ಪ್ರಶಸ್ತಿ ಸಾರುತ್ತದೆ ಎಂದು ಶ್ಲಾಘಿಸಿದರು.
ಪ್ರಶಸ್ತಿ ಕುರಿತು ಮಾತನಾಡಿದ ದೀಕ್ಷಾ ವೇದಾಂತು ಸಂಸ್ಥೆಯ ಸ್ಥಾಪಕ ಡಾ.ಜಿ. ಶ್ರೀಧರ್, ದೇಶ ಕಟ್ಟುವ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸುವ ಶಿಕ್ಷಕರಿಗೆ ಟಿಎಜಿಎ ಪ್ರಶಸ್ತಿ ನೀಡಿ ಗೌರವಿಸುವ ಪರಿಕಲ್ಪನೆಯನ್ನು ಡಿ4ಎ ಎಜುಕೇಶನ್ ಫೌಂಡೇಶನ್ ಪ್ರಸ್ತುತ ಪಡಿಸಿದಾಗ ನಮಗೆ ನಿಜಕ್ಕೂ ಆನಂದವಾಯಿತು. ಅವರ ಜೊತೆ ನಾವು ಸಂತೋಷದಿಂದ ಕೈ ಜೋಡಿಸಿದ್ದೇವೆ. ಮುಂಬರುವ ದಿನಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಈ ಪ್ರಶಸ್ತಿ ನೀಡುವ ಆಲೋಚನೆ ಹೊಂದಿದ್ದೇವೆ ಎಂದರು.
ಯಶಸ್ವಿಯಾಗಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಿಕ್ಷಣತಜ್ಞರು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಶಸ್ತಿ ವಿಭಾಗಗಳು:
ಶಿಕ್ಷಾ ರತ್ನ: ಇದು ಜೀವಮಾನ ಸಾಧನೆ ಪ್ರಶಸ್ತಿ ಆಗಿದ್ದು, ತಮ್ಮ ಶಾಲೆಗಳ ಜೊತೆಗೆ ಸಮುದಾಯದಲ್ಲಿಯೂ ಗಾಢ ಪ್ರಭಾವ ಬೀರಿದ ಶಿಕ್ಷಕರಿಗೆ ಸಲ್ಲುವ ಪುರಸ್ಕಾರ.
ಶಿಕ್ಷಾ ವಿಭೂಷಣ: ವಿದ್ಯಾರ್ಥಿಗಳನ್ನು ಗಾಢವಾಗಿ ಪ್ರಭಾವಿಸಿದ ಮತ್ತು ಸ್ಫೂರ್ತಿ ನೀಡಿದ ಶಿಕ್ಷಕರನ್ನು ಗೌರವಿಸುವ ಪ್ರಶಸ್ತಿ.
ಶಿಕ್ಷಾ ಭೂಷಣ: ಅದ್ಭುತ ವಿಷಯ ಪರಿಣತಿ ಮತ್ತು ಶ್ರೇಷ್ಠ ಬೋಧನಾ ಕೌಶಲ್ಯ ಹೊಂದಿರುವ ಶಿಕ್ಷಕರಿಗೆ ಸಲ್ಲುವ ಪ್ರಶಸ್ತಿ.
ಶಿಕ್ಷಾ ಶ್ರೀ: ಮಾರ್ಗದರ್ಶನ ನೀಡುವ ವಿಚಾರದಲ್ಲಿ ಮತ್ತು ಶ್ರೇಷ್ಠ ಶಿಕ್ಷಣ ಒದಗಿಸುವ ವಿಚಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಯುವ ಶಿಕ್ಷಕರನ್ನು ಗೌರವಿಸುವ ಪ್ರಶಸ್ತಿ.




