ಸರ್ಕಾರಿ ಭೂಮಿ ಬೀಟ್ ಸಿಸ್ಟಂಗೆ ಒತ್ತು
ಕಲಬುರಗಿ: ತಹಶೀಲ್ದಾರರು ಅವರ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ತಹಶೀಲ್ದಾರರು ತಾಲೂಕು ಮಟ್ಟದ ದಂಡಾಧಿಕಾರಿಗಳೂ ಆಗಿದ್ದು, ಸರ್ಕಾರಿ ಜಮೀನನ್ನು ಉಳಿಸುವ ನಿಟ್ಟಿನಲ್ಲಿ “ಬೀಟ್ ಸಿಸ್ಟಂ” ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಖಡಕ್ ಸೂಚನೆ ನೀಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಜಮೀನುಗಳನ್ನು ಉಳಿಸಬೇಕು ಹಾಗೂ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೂ ಖಡಕ್ ಸೂಚನೆ ನೀಡಿದ್ದಾರೆ ಎಂದರು.
ಇದೇ ಕಾರಣಕ್ಕೆ “ಬೀಟ್ ಸಿಸ್ಟಂ ಆ್ಯಪ್”ಅನ್ನು ಅಭಿವೃದ್ಧಿಪಡಿಸಲಾಯಿತು. ಈ ಆ್ಯಪ್ ಮೂಲಕ ಈಗಾಗಲೇ ಶೇ.90 ರಷ್ಟು ಸರ್ಕಾರಿ ಜಮೀನನ್ನು ಗುರುತಿಸಲಾಗಿದೆ. ಶೀಘ್ರ ಶೇ.100 ರಷ್ಟು ಜಮೀನನ್ನೂ ಗುರುತಿಸಬೇಕು. ತಹಶೀಲ್ದಾರರೇ ಮುಂದೆ ನಿಂತು ಒತ್ತುವರಿಯನ್ನು ತೆರವುಗೊಳಿಸುವ ಕೆಲಸ ಶುರು ಮಾಡಬೇಕು ಎಂದರು.
ಅಲ್ಲದೆ, ಹಲವು ಕಡೆಗಳಲ್ಲಿ ಕೆರೆ ಮತ್ತು ಸ್ಮಶಾನ ಜಾಗಗಳನ್ನೇ ಒತ್ತುವರಿ ಮಾಡಲಾಗಿದೆ. ಇಂತಹ ಎಲ್ಲಾ ಜಮೀನಿನಲ್ಲೂ ಒತ್ತುವರಿ ತೆರವುಗೊಳಿಸಬೇಕು, ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಬೀಟ್ ಹಾಕಬೇಕು. ಆ ಮೂಲಕ ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕು ಎಂದರು.




