ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಗೆ ಎನ್ಹೆಚ್ಎಂ/ಎನ್ಬಿಡಿಸಿಪಿ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ 01 ಹುದ್ದೆ ಕೀಟ ಸಂಗ್ರಾಹಕರನ್ನು ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಸ್ವಯಂ ದೃಢೀಕರಣದೊಂದಿಗೆ ದಾಖಲಾತಿ ನಕಲು ಪ್ರತಿಗಳೊಂದಿಗೆ ಇದೇ ಜೂನ್ 10ರಂದು ಸಂಜೆ 4.30ರೊಳಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಖುದ್ದಾಗಿ ಸಲ್ಲಿಸುವುದು.
ಸ್ವ-ವಿವರದೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ದ್ವಿಚಕ್ರ ಚಾಲನಾ ಪರವಾನಿಗೆ ಪತ್ರದೊಂದಿಗೆ ಸಲ್ಲಿಸಬೇಕು.



