ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಕೊನೆಗೂ ಬಯಲಾಗಿದೆ. ಅವರಿಗೆ ಉದ್ಯಮದ ಪಾಲುದಾರರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸೌಂದರ್ಯ ಜಗದೀಶ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಪಾಲುದಾರರು ಮೋಸ ಮಾಡಿರುವುದು ಉಲ್ಲೇಖವಾಗಿದೆ ಎಂದು ಜಗದೀಶ್ ಪತ್ನಿ ಶಶಿರೇಖಾ ನೀಡಿದ ದೂರಿನ ಅನ್ವಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪತಿಯ ಆತ್ಮಹತ್ಯೆಗೆ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರೇ ಕಾರಣ ಹಾಗೂ ಅವರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಶಶಿರೇಖಾ ಆರೋಪಿಸಿದ್ದಾರೆ. ಕಳೆದ ಏಪ್ರಿಲ್ 4ರಂದು ಸೌಂದರ್ಯ ಜಗದೀಶ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ದೂರಿನಲ್ಲೇನಿದೆ?: ಮೇ 18ರಂದು ಜಗದೀಶ್ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್ ನೋಟ್ ಲಭ್ಯವಾಯಿತು. ಅದರಲ್ಲಿ, ಸೌಂದರ್ಯ ಕನ್ಸ್ಟ್ರಕ್ಷನ್ ನ ಸಹ ಪಾಲುದಾರರಾದ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಎಂಬವರು ಜಗದೀಶ್ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು.
ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ್ಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ನಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ.
ನಂತರ ಸಬೂಬು ಹೇಳಿ ಖಾಲಿ ಚೆಕ್ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್ ಸಹಿಯನ್ನು ನಕಲಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದಾಗ ಜಗದೀಶ್ ಅವರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅದೇ ವಿಚಾರವಾಗಿ ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ನಂತರ, ಸುರೇಶ್ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್ ಹಾಗೂ ಹೊಂಬಣ್ಣ ಅವರು ಜಗದೀಶ್ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ.



