ಬೆಂಗಳೂರು: ಅವೈಜ್ಞಾನಿಕವಾಗಿ ಪೆಟ್ರೋಲ್, ಡೀಸೆಲ್ ಮಾರಾಟ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯದ ಜನತೆ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದರು.
ಕಾಲಭೈರವನ ದರ್ಶನ ಮಾಡಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಒಕ್ಕಲಿಗ ಸಮಾಜ ಮತ್ತು ರಾಜ್ಯಕ್ಕೆ ಗೌರವ ತರುವಂತೆ ಕೆಲಸ ಮಾಡಲು ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.




