20ರೊಳಗೆ ಪಕ್ಷದೊಳಗಿನ ಸಮಸ್ಯೆ ಬಗೆಹರಿಯಲಿದೆ: ವಿಜಯೇಂದ್ರ

1 year ago

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಸಮಸ್ಯೆ ಇದೇ ತಿಂಗಳ 20ರೊಳಗೆ ಬಗೆಹರಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಾಳೆ ಎಲ್ಲಾ ಮಾಹಿತಿಯನ್ನು ನೀಡಲಿದ್ದೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಫೆ.20ರಂದು ಯತ್ನಾಳ್ ತಂಡದಿಂದ ಮತ್ತೆ ಸಭೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರಿದ್ದಾರೆ. ಸಭೆ ಕರೆದು ಪಕ್ಷ ಬಲಪಡಿಸುವ ಬಗ್ಗೆ ಚರ್ಚೆ ಮಾಡುತ್ತಾರೆ. ಅದಕ್ಕೆ ನಾನು ಯಾಕೆ ಬೇಡ ಎನ್ನಲಿ ಎಂದು ಪ್ರಶ್ನಿಸಿದರು.

ಭಿನ್ನಮತೀಯರ ಸಭೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಯಾರೇನೇ ಮಾಡಿದರೂ ಪಕ್ಷಕ್ಕೆ ಪೂರಕವಾಗಿ ಮಾಡುತ್ತಾರೆ ಎಂಬುದು ನನ್ನ ಅಭಿಲಾಷೆ ಎಂದರು.

Leave a Reply