ಬೆಳಗಾವಿ: ಜಿಲ್ಲೆಯ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಇನ್ನಿತರ ಸಿಬ್ಬಂದಿ ಕೊರತೆ ಬಹಳಷ್ಟಿದೆ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸದ್ಯ ಇರುವ ಸಿಬ್ಬಂದಿ ಮೇಲಿರುವ ಹೊರೆ ಕಡಿಮೆ ಮಾಡಲು ಅದಷ್ಟು ಬೇಗ ಇನ್ನಷ್ಟು ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಇದರಿಂದ ಮತ್ತಷ್ಟು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಾಯವಾಗಲಿದೆ ಎಂದರು.
ಇಲಾಖೆಯ ಅಧಿಕಾರಿ, ಸಿಬ್ಬಂದಿ ವಾಹನ ಸವಾರರು ಹಾಗೂ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಿ, ತ್ವರಿತವಾಗಿ ಸೇವೆಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಎ. ಎಂ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಧಾರವಾಡ ಉತ್ತರದ (ಪ್ರವರ್ತನ) ಅಪರ ಸಾರಿಗೆ ಆಯುಕ್ತ ಕೆ. ಟಿ ಹಾಲಸ್ವಾಮಿ, ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಎಂ. ಪಿ.ಓಂಕಾರೇಶ್ವರಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗೇಶ್ ಮುಂಡಾಸ, ನಿವೃತ್ತ ಪ್ರಾದೇಶಿಕ ಸಾರಿಗೆ ಆಯುಕ್ತರಾದ ಶಿವಾನಂದ ಮಗದುಮ್ಮ, ಗುತ್ತಿಗೆದಾರ ಉದಯ ಕುಮಾರ ಆರ್. ಶೆಟ್ಟಿ ಸೇರಿದಂತೆ ಸಾರಿಗೆ ಇಲಾಖೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.




