ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮಳಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ.
ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ




