ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ?: ಆರ್ ಅಶೋಕ್

2 years ago

ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.

ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.

– ಆರ್ ಅಶೋಕ್, ವಿಪಕ್ಷ ನಾಯಕ

Leave a Reply