ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಮಳಿಗೆ ಸ್ಥಾಪನೆ ಮಾಡಲಾಗಿದೆ. ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಉತ್ಪನ್ನಗಳ ಮಾರಾಟ ಕೇಂದ್ರವಾದ “ಕಲಾಲೋಕ ಮಳಿಗೆ”ಯನ್ನು ಉದ್ಘಾಟಿಸಿ, ಮಾತನಾಡಿದರು.
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಮಳಿಗೆ ಸ್ಥಾಪನೆ ಮಾಡಲಾಗಿದೆ. ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ ಎಂದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತಿದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟದ ಗುರಿಯನ್ನು ಹೊಂದಲಾಗಿದೆ ಎಂದರು.












