ಬೆಂಗಳೂರು: ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಕಿಡಿಕಾರಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂದಿರವೇ ಇರಲಿ ಒಕ್ಕಲಿಗರ ಮಠವೇ ಇರಲಿ ಅಥವಾ ಬೇರೆ ಯಾವುದೇ ಧಾರ್ಮಿಕ ಕೇಂದ್ರವಾಗಲೀ ಅವುಗಳ ಸಮಾಜಸೇವೆ ಮಾಡುವ ಕೇಂದ್ರಗಳು. ರಾಜಕಾರಣಕ್ಕಾಗಿ ಮಾತನಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಯಾರೂ ಕೂಡ ಯಾವುದೇ ಮಠದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದು, ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ. ಒಕ್ಕಲಿಗರ ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಆ ಮಠವನ್ನು ಯಾರೂ ಕೂಡ ಅನಗತ್ಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಹಿಂದಿನ ಸ್ವಾಮೀಜಿಗಳಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕೇವಲ ಒಕ್ಕಲಿಗರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಎಲ್ಲಾ ಸಮುದಾಯವನ್ನು ಮುನ್ನಡೆಸಿದ್ದರು. ಈಗಿನ ಶ್ರೀಗಳು ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ನನಗೆ ಕೊನೆ ಕ್ಷಣದಲ್ಲಿ ಬರುವಂತೆ ಸೂಚನೆ ಬಂದಿತ್ತು. ನಾನು ಅನಗತ್ಯವಾಗಿ ಮಾತನಾಡಬಾರದೆಂದು ಸುಮ್ಮನಿದ್ದೇನೆ. ಮಠಗಳು, ಮಠಾಧೀಶರ ಬಗ್ಗೆ ಸಮಾಜ ತನ್ನದೇ ಆದ ಗೌರವ ಇಟ್ಟುಕೊಂಡಿರುತ್ತದೆ. ಅದನ್ನು ಉಳಿಸುವುದು ಅಗತ್ಯ ಎಂದರು.




