ಬಳ್ಳಾರಿ: ನೀರಿನ ಟ್ಯಾಂಕ್ನೊಳಗೆ ಬಿದ್ದು ಬೆಂಗಳೂರಿನ ಒಬ್ಬ ಸೇರಿ ಮೂವರು ಇಂಜಿನಿಯರ್ಗಳು ಸಾವಿಗೀಡಾದ ಹೃದಯ ವಿದ್ರಾವಕಘಟನೆ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಬೆಂಗಳೂರಿನ ಸುಶಾಂತ್(25), ಭುವನಹಳ್ಳಿಯ ಜಡೆಪ್ಪ(23), ಚೆನ್ನೈನ ಶಿವಮಹದೇವ(23) ಮೃತಪಟ್ಟವರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪೈಪ್ ಜೋಡಣೆ ಕೆಲಸ ಪರಿಶೀಲನೆ ಮಾಡುತ್ತಿದ್ದಾಗ ಬೃಹತ್ ಪೈಪ್ನಲ್ಲಿ ಇದ್ದಕ್ಕಿದ್ದಂತೆ ಬಂದ ನೀರಿನಲ್ಲಿ ಕೊಚ್ಚಿಹೋಗಿ ದೊಡ್ಡ ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಇದು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಹೋದ ಪರಿಣಾಮವೇ, ಆಕಸ್ಮಿಕವೇ ಅಥವಾ ಇದರ ಹಿಂದೆ ಒಳಸಂಚು ಇದೆಯೇ ಎಂಬ ಬಗ್ಗೆಯೂ ತನಿಖೆ ಪೊಲೀಸರು ನಡೆಸಲಾಗುತ್ತಿದ್ದಾರೆ.
ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.




