ಕಲಬುರಗಿ: ಕಲಬುರಗಿ ವಿಭಾಗದ ಏಳು ಜಿಲ್ಲೆಗಳಲ್ಲಿ ಒಟ್ಟು 1.32 ಲಕ್ಷ ಬಗರ್ ಹುಕುಂ ಅರ್ಜಿಗಳು ಸಲ್ಲಿಕೆಯಾಗಿದ್ದು, ಮುಂದಿನ ಮೂರು ತಿಂಗಳೊಳಗಾಗಿ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ. ಅರ್ಹ ರೈತರಿಗೆ ಜಮೀನು ಮಂಜೂರು ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಡವರಿಗೆ, ಭೂ ರಹಿತರಿಗೆ ಹಾಗೂ ಅರ್ಹ ರೈತರಿಗೆ ಭೂಮಂಜೂರು ಮಾಡುವುದು ಸರ್ಕಾರದ ಕರ್ತವ್ಯ ಎಂದರು.
ಆದರೆ, ವರ್ಷವಾದರೂ ಈ ಅರ್ಜಿಗಳ ವಿಲೇ ಆಗಿಲ್ಲ. ಹೀಗಾಗಿ ಮುಂದಿನ ಒಂದು ತಿಂಗಳಲ್ಲಿ ಅರ್ಹರಿಗೆ ಭೂ ಮಂಜೂರು ಮಾಡಬೇಕು. ಈಗ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳನ್ನು ಮಾತ್ರ ಶೀಘ್ರದಲ್ಲಿ ಶಾಸಕರ ನೇತೃತ್ವದ ಬಗರ್ ಹುಕುಂ ಸಭೆಯ ಮುಂದಿಡಿ ಎಂದು ಸೂಚಿಸಿದರು.
ಯಾರಿಗೆ ಜಮೀನು ನೀಡಬೇಕು? ಯಾರಿಗೂ ಜಮೀನು ನೀಡಬಾರದು? ಎಂಬ ವಿಚಾರವನ್ನು ಸಭೆ ನಿರ್ಧರಿಸಲಿ. ಒಟ್ಟಾರೆ ಮುಂದಿನ ಮೂರು ತಿಂಗಳಲ್ಲಿ ಈ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ ಎಂದು ತಿಳಿಸಿದರು.



