ಬಗರ್‌ ಹುಕುಂ ಅರ್ಜಿ ವಿಲೇಗೆ ಮೂರು ತಿಂಗಳ ಗಡುವು!: ಕೃಷ್ಣ ಬೈರೇಗೌಡ

2 years ago

ಕಲಬುರಗಿ: ಕಲಬುರಗಿ ವಿಭಾಗದ ಏಳು ಜಿಲ್ಲೆಗಳಲ್ಲಿ ಒಟ್ಟು 1.32 ಲಕ್ಷ ಬಗರ್‌ ಹುಕುಂ ಅರ್ಜಿಗಳು ಸಲ್ಲಿಕೆಯಾಗಿದ್ದು, ಮುಂದಿನ ಮೂರು ತಿಂಗಳೊಳಗಾಗಿ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ. ಅರ್ಹ ರೈತರಿಗೆ ಜಮೀನು ಮಂಜೂರು ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಡವರಿಗೆ, ಭೂ ರಹಿತರಿಗೆ ಹಾಗೂ ಅರ್ಹ ರೈತರಿಗೆ ಭೂಮಂಜೂರು ಮಾಡುವುದು ಸರ್ಕಾರದ ಕರ್ತವ್ಯ ಎಂದರು.

ಆದರೆ, ವರ್ಷವಾದರೂ ಈ ಅರ್ಜಿಗಳ ವಿಲೇ ಆಗಿಲ್ಲ. ಹೀಗಾಗಿ ಮುಂದಿನ ಒಂದು ತಿಂಗಳಲ್ಲಿ ಅರ್ಹರಿಗೆ ಭೂ ಮಂಜೂರು ಮಾಡಬೇಕು. ಈಗ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳನ್ನು ಮಾತ್ರ ಶೀಘ್ರದಲ್ಲಿ ಶಾಸಕರ ನೇತೃತ್ವದ ಬಗರ್‌ ಹುಕುಂ ಸಭೆಯ ಮುಂದಿಡಿ ಎಂದು ಸೂಚಿಸಿದರು.

ಯಾರಿಗೆ ಜಮೀನು ನೀಡಬೇಕು? ಯಾರಿಗೂ ಜಮೀನು ನೀಡಬಾರದು? ಎಂಬ ವಿಚಾರವನ್ನು ಸಭೆ ನಿರ್ಧರಿಸಲಿ. ಒಟ್ಟಾರೆ ಮುಂದಿನ ಮೂರು ತಿಂಗಳಲ್ಲಿ ಈ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ ಎಂದು ತಿಳಿಸಿದರು.

Leave a Reply