ಚಿತ್ರದುರ್ಗ: ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PMRKVY) ಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು 3 ದಿನಗಳ ತರಬೇತಿಯನ್ನು ಇದೇ ಮಾರ್ಚ್ 05 ರಿಂದ 07 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಆಸಕ್ತ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ತರಬೇತಿ ಕಾರ್ಯಕ್ರಮದಲ್ಲಿ ಮೊದಲನೇ ದಿನ ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞ ಅಂಜಿನಪ್ಪ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಸಮರ್ಪಕ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ಹಾಗೂ ರಸಾವರಿ ಪದ್ಧತಿ ಕುರಿತು ಮಾಹಿತಿ ನೀಡುವರು.
ಎರಡನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಹಾಗೂ ಕೀಟಶಾಸ್ತ್ರಜ್ಞರಾದ ಡಾ. ದಾನ ರೆಡ್ಡಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡುವರು.
ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.
ತರಬೇತಿಯ ಮೂರನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಒಬ್ಬೂರಿನ ಶ್ರೀ ಹನುಮಂತ ನಾಯಕ್ ಅವರು ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಹಾಗೂ ಎರೆ ಗೊಬ್ಬರ ತಯಾರಿಕೆ ಕುರಿತು ಕುರಿತು ಮಾಹಿತಿ ನೀಡುವರು.
ಆಸಕ್ತ 50 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್ಐಡಿಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.




