ಮಹದಾಯಿ ವಿಚಾರದಲ್ಲಿ ಈಗಾಗಲೇ ನ್ಯಾಯಮಂಡಳಿಯ ಆದೇಶವಾಗಿದೆ: ಎಂ ಬಿ ಪಾಟೀಲ್

9 months ago

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಈಗಾಗಲೇ ನ್ಯಾಯಮಂಡಳಿಯ ಆದೇಶವಾಗಿದೆ ಮತ್ತು ನೋಟಿಫಿಕೇಶನ್ ಕೂಡ ಆಗಿದೆ. ಹೀಗಿರುವಾಗ ಗೋವಾ ಪದೇ ಪದೇ ಕ್ಯಾತೆ ತೆಗೆಯುವುದು ಸರಿಯಲ್ಲ ಎಂದು ಬೃಹತ್ ಕೈಗಾರಿಕೆಯ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾನಡಿದ ಅವರು, ಗೋವಾ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.

ಮಹದಾಯಿ ವಿಚಾರವಾಗಿ ಕರ್ನಾಟಕ ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರು ಎಲ್ಲರನ್ನು ಒಟ್ಟುಗೂಡಿಸಿ, ನಮಗೆ ಪರವಾನಿಗೆ ಕೊಡಿಸಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದರು.

Leave a Reply