ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರ ಸಭಾಂಗಣದ ನಿರ್ವಹಣೆಗಾಗಿ ಬಾಡಿಗೆ ದರವನ್ನು ರೂ.3000 ದಿಂದ ರೂ.10,000ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣವನ್ನು ದುರಸ್ಥಿಪಡಿಸಲಾಗಿದೆ. ಹಿಂದೆ ನಿಗದಿಪಡಿಸಿರುವ ಬಾಡಿಗೆ ಮೊತ್ತ ಅತೀ ಕಡಿಮೆಯಾಗಿದ್ದು, ಇದರ ವಿದ್ಯುತ್ ವೆಚ್ಚ ಸೇರಿದಂತೆ ಇತರೆ ವೆಚ್ಚಗಳ ನಿರ್ವಹಣೆಗಾಗಿ ದರಪರಿಷ್ಕರಣೆ ಮಾಡಲಾಗಿದೆ.
ಆದ್ದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಕಂದಾಯ ಇಲಾಖೆ ಹೊರತುಪಡಿಸಿ, ಇನ್ನುಳಿದ ಸರ್ಕಾರಿ, ಅರೆ ಸರ್ಕಾರಿ ಇಲಾಖೆ, ಸಂಘ-ಸಂಸ್ಥೆ, ಮಂಡಳಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ದಿನದ ಬಾಡಿಗೆ ಮೊತ್ತ ರೂ.10 ಸಾವಿರ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.




