ಅನ್ನಭಾಗ್ಯದ ಹೊರೆ ಹೊರಲಾಗದೆ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ಸಿಎಂ @siddaramaiah ಅವರು ತೆರಿಗೆದಾರರಿಗೆ, ಸರ್ಕಾರಿ ನೌಕರರಿಗೆ ಉಚಿತ ಅಕ್ಕಿ ಕೊಡಬೇಕಾ ಎಂದು ಈ ರಾಜ್ಯ ಕಂಡ ಮಹಾನ್ ದಕ್ಷ ಆಡಳಿತಗಾರರ ರೀತಿ ಹೇಳಿಕೆ ಕೊಟ್ಟಿದ್ದಾರೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಹಾಗಾದರೆ ಶಕ್ತಿ ಗ್ಯಾರೆಂಟಿ ಅಡಿಯಲ್ಲಿ ತೆರಿಗೆದಾರರು, ಸರ್ಕಾರಿ ನೌಕರರು ಉಚಿತ ಬಸ್ಸು ಸೇವೆ ಬಳಸುತ್ತಿಲ್ಲವೇ?
ಹಾಗಾದರೆ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಯಡಿ ತೆರಿಗೆದಾರರು, ಸರ್ಕಾರಿ ನೌಕರರು 200 ಯೂನಿಟ್ ವರೆಗೂ ಉಚಿತ ಕರೆಂಟ್ ಪಡೆಯುತ್ತಿಲ್ಲವೇ?
ಅಥವಾ ಈ ಹೇಳಿಕೆ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳಲ್ಲೂ ಶೀಘ್ರದಲ್ಲೇ ಫಲಾನುಭವಿಗಳಿಗೆ ಕೊಕ್ ನೀಡಲಾಗುತ್ತದೆ ಎಂಬ ಮುನ್ಸೂಚನೆಯೇ?
ಈ ಎಡಬಿಡಂಗಿ @INCKarnataka ಸರ್ಕಾರಕ್ಕೆ ಒಂದು ದೂರದೃಷ್ಟಿ, ಪೂರ್ವಸಿದ್ಧತೆ, ಗೊತ್ತು, ಗುರಿ ಇವ್ಯಾವುದೂ ಇಲ್ಲ.
ಕೇವಲ ಚುನಾವಣೆಗೆ ಗೆಲ್ಲಲು ಮನಸ್ಸಿಗೆ ಬಂದ ಹಾಗೆ ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ ಎಂದು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ, ಈಗ ಗ್ಯಾರೆಂಟಿಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ. ಇದೇ ಸತ್ಯ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ



