ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ ತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿರುವ ಅವರಿಗೆ ಇದೀಗ ಕೇಂದ್ರ ವಿದೇಶಾಂಗ ಸಚಿವಾಲಯ ಕಾರಣ ಕೇಳಿ ನೋಟಿಸ್ ಜಾರಿಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಜ್ಯ ಸರ್ಕಾರದ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಅವರ ರಾಜತಂತ್ರಿಕ ಪಾಸ್ ಪೋರ್ಟ್ ರದ್ದು ಪಡಿಸುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಗೆ ಪತ್ರ ಬರೆದಿದೆ. ಇದಕ್ಕೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ವ್ಯವಹಾರಗಳ ಇಲಾಖೆ ಇದೀಗ ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ಜಾರಿಗೊಳಿಸಿದೆ. ಇದರಲ್ಲಿ ಅವರ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪವನ್ನು ಪ್ರಸ್ತಾಪಿಸಿದ್ದು ತಕ್ಷಣವೇ ಇದಕ್ಕೆ ಉತ್ತರ ನೀಡಬೇಕು ಎಂದು ಸೂಚನೆ ನೀಡಿದೆ.
ಆದಷ್ಟು ಶೀಘ್ರ ನೀವು ಶೋಕಾಸ್ ನೋಟಿಸ್ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶೋಕಾಸ್ ನೋಟಿಸ್ನಲ್ಲಿ ಎಚ್ಚರಿಕೆ ನೀಡಲಾಗಿದೆ. ನೀವು ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ್ಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ.
ಒಂದು ವೇಳೆ ಶೋಕಾಸ್ ನೋಟಿಸ್ಗೂ ಉತ್ತರ ನೀಡದಿದ್ದರೆ ಅವರಿಗೆ ಇನ್ನಷ್ಟು ಕಾನೂನಿನ ಕುಣಿಕೆ ಬಿಗಿಯಾಗಲಿದೆ. ವಿದೇಶಾಂಗ ವ್ಯವಹಾರಗಳ ಇಲಾಖೆ ಅನಿವಾರ್ಯವಾಗಿ ಪಾಸ್ಪೋರ್ಟ್ ರದ್ದುಪಡಿಸಲಿದೆ. ಆಗ ಅವರು ವಿಧಿ ಇಲ್ಲದೆ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಪಡಬೇಕು.




