ಬೆಂಗಳೂರು: ಉತ್ತರ ಕರ್ನಾಟಕ ಜನರ ಬಹುದಿನದ ಬೇಡಿಕೆಯಾದ ಕೃಷ್ಣ ಮೇಲ್ದಂಡೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಹಣಕಾಸು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಂತರರಾಜ್ಯ ಜಲ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಾಧ್ಯವಿಲ್ಲ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣದ ತೀರ್ಪು ಅಧಿಸೂಚನೆ ಜಾರಿಯಾಗಬೇಕು. ಆಲಮಟ್ಟಿ ಅಣೆಕಟ್ಟೆಯನ್ನು 519.06 ಅಡಿಯಿಂದ 524.25 ಅಡಿ ಎತ್ತರಿಸಲು 1 ಲಕ್ಷ ಭೂಮಿ ಮುಳುಗಡೆಯಾಗಲಿದೆ. ಅಷ್ಟು ಜಮೀನಿಗೂ ಪರಿಹಾರ ನೀಡಬೇಕು. ಭಾರಿ ಪ್ರಮಾಣದ ಹಣ ಬೇಕಿದೆ. ಈವರೆಗೂ 30 ಸಾವಿರ ಎಕರೆ ಸ್ವಾಧೀನ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದರು.
ನ್ಯಾಯಾಲಯದ ತೀರ್ಪು ಅಧಿಸೂಚನೆಯಾದ ಬಳಿಕ ಹಣಕಾಸು ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಎಲ್ಲಾ ಅರ್ಹತೆಗಳೂ ಇವೆ. ಆದರೆ ಅಂತರರಾಜ್ಯ ನದಿ ವಿವಾದ ಇರುವುದರಿಂದಾಗಿ ಅದನ್ನು ಅಧಿಸೂಚನೆ ಹೊರಡಿಸಿ ಇತ್ಯರ್ಥಪಡಿಸಲು ಸಾಧ್ಯವಿದೆ ಎಂದರು.




