ಬೆಂಗಳೂರು: ಕೆಲವು ಸರ್ವೇ ನಂಬರ್ಗಳಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ರೈತರ ಹೆಸರೂ ಇರುತ್ತದೆ. ಜಂಟಿ ಸರ್ವೇ ನಡೆಸಿ ಎಲ್ಲರಿಗೂ ನೂತನ ಹಿಸ್ಸಾ ನಂಬರ್ ನೀಡದೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಇಲ್ಲ. ಹೀಗಾಗಿ ಸರ್ವೇ ಕೆಲಸಗಳನ್ನು ವೇಗಗೊಳಿಸುವ ನಿಟ್ಟಿನಲ್ಲಿ ಎಲ್ಲಾ ತಾಲೂಕಿಗೂ ರೋವರ್ಗಳನ್ನು ನೀಡಲಾತ್ತಿದೆ. ಪ್ರತಿ ತಾಲೂಕಿಗೆ ಮೂರು ರೋವರ್ಗಳನ್ನು ನೀಡಲು ಟೆಂಡೆರ್ ಕರೆತಯಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಆಯ್ಕೆಯಾದ 1,000 ಪರವಾನಗಿ ಭೂಮಾಪಕರುಗಳಿಗೆ ಪರವಾನಗಿ ಪ್ರಮಾಣ ಪತ್ರ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡಿದರು.
ಮೊಘಲರ ಕಾಲದಲ್ಲಿ ಚೈನ್ನಲ್ಲಿ ಭೂ ಅಳತೆ ಮಾಡಲಾಗುತ್ತಿತ್ತು. ಈಗಲೂ ಅದೇ ಪದ್ದತಿ ಅನುಸರಿಸುವುದು ತರವಲ್ಲ. 18-19ನೇ ಶತಮಾನದ ರೀತಿ ಕೆಲಸ ಮಾಡಿದರೆ ಎಷ್ಟೇ ಸಿಬ್ಬಂದಿ ಇದ್ದರೂ ಸಾಲದು. ಈಗಾಗಿ ಎಲ್ಲರೂ 21ನೇ ಶತಮಾನದ ಎಲ್ಲಾ ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡಬೇಕು. ಅದೇ ಕಾರಣಕ್ಕೆ ಸರ್ವೇ ಕೆಲಸದಲ್ಲಿ ರೋವರ್ ಬಳಕೆಯನ್ನು ಅಳವಡಿಸಲಾಗಿದೆ ಎಂದರು.
ರೋವರ್ ಸರ್ವೇ ಮೂಲಕ ಕೆಲಸದ ವೇಗ ಮೂರರಿಂದ ಐದು ಪಟ್ಟು ಹೆಚ್ಚಾಗುತ್ತದೆ. ಒಬ್ಬ ವ್ಯಕ್ತಿ ಒಂದೇ ದಿನಕ್ಕೆ ಐದಕ್ಕೂ ಹೆಚ್ಚು ಸರ್ವೇ ನಡೆಸಬಹುದು. ಅಲ್ಲದೆ, ಸರ್ವೇ ಸಹಾಯದಿಂದ ಮುಂದಿನ ಎರಡು ತಿಂಗಳಲ್ಲಿ ಎಲ್ಲಾ ಆಖಾರ್ ಬಂದ್ಗಳನ್ನೂ ಡಿಜಿಟಲೀಕರಣಗೊಳಿಸಲಾಗುವುದು. ಕಾಲಂ 3-9 ವಿಸ್ತೀರ್ಣ ಹೊಂದಾಣಿಕೆ ಬಗೆಹರಿಸಿ ಹೊಸ ಸರ್ವೇ ನಂಬರ್ ನೀಡಲಾಗುವುದು. ಈ ಕೆಲಸ ಮಾಡಲೇಬೇಕು, ಜನರಿಗೆ ನೆಮ್ಮದಿ ನೀಡಲೇಬೇಕು ಎಂದರು.




