ಮೈಸೂರು: ಪ್ರಜಾಪ್ರಭುತ್ವ ಮತ್ತು ಜನರ ಸಂಕಷ್ಟಗಳನ್ನು ಹೇಳಬೇಕಾದ ವಿಧಾನಸಭೆಯ ಕಲಾಪದಲ್ಲಿ ವ್ಯಕ್ತಿಗತ ಮತ್ತು ದ್ವೇಷ ಪೂರಿತ ಭಾಷೆ ಬಳಸುವುದು ಮತ್ತು ಸ್ಪೀಕರ್ ಅವರ ಮೇಲೆಯೇ ಕೆಟ್ಟ ವರ್ತನೆ ತೋರುವುದು ಜನ ಪ್ರತಿನಿಧಿಗಳು ಜನ ಸಾಮಾನ್ಯರಿಗೆ ನೀಡುವಂತಹ ಕೆಟ್ಟ ಸಂದೇಶವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಹನಿ ಟ್ರ್ಯಾಪ್ ವಿಷಯಕ್ಕೆ ಸಂಬಂಧಿಸಿದಂತೆ ಇದೊಂದು ಕೆಟ್ಟ ಸಂಗತಿಯಾಗಿದ್ದು ಸಾರ್ವಜನಿಕ ಜೀವನದಲ್ಲಿ ಇರುವ ವ್ಯಕ್ತಿಗಳ ಚಾರಿತ್ರ್ಯ ಹರಣ ಮಾಡಲು ಬಳಸುವ ಕುತಂತ್ರವಾಗಿದೆ ಎಂದರು.
ಈ ರೀತಿಯ ಕುತಂತ್ರಗಳು ದಶಕಗಳಿಂದ ಚಾಲ್ತಿಯಲ್ಲಿ ಇದ್ದು ಇದನ್ನು ಸೂಕ್ತ ಕಾಯ್ದೆಯ ಜಾರಿಯ ಮೂಲಕ ತಡೆಗಟ್ಟದೇ ಹೋದರೆ ಸಾರ್ವಜನಿಕ ಜೀವನದ ಮಹತ್ವವು ಜನರ ಕಣ್ಣಲ್ಲಿ ಸಂಪೂರ್ಣ ಕುಸಿದು ಹೋಗುತ್ತದೆ. ಪ್ರಜಾಪ್ರಭುತ್ವದ ಸಂದರ್ಭದಲ್ಲಿ ಇಂತಹ ಬೆಳವಣಿಗೆಗಳು ನಡೆಯಲು ನಾವು ಆಸ್ಪದ ಕೊಡಬಾರದು ಎಂದರು.
ಹನಿಟ್ರ್ಯಾಪ್ ವಿಷಯಕ್ಕೆ ಸಂಬಂಧಿತ ಸಚಿವ ರಾಜಣ್ಣ ಅವರು ಗೃಹ ಸಚಿವರಿಗೆ ದೂರನ್ನು ನೀಡಿದ್ದು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾರೆ. ಈ ವಿಷಯದಲ್ಲಿ ಸೂಕ್ತ ತನಿಖೆ ನಡೆಯಲಿದ್ದು ಬಾಧಿತರಿಗೆ ನ್ಯಾಯ ತೊರಲಿದೆ ಎಂದರು.




