ಬೆಂಗಳೂರು: ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಎಸ್ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಎಂ ಸಿ ಸುಧಾಕರ್, ವಿವಿಧ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಹಿಂದಿನಿಂದಲೂ ಖಾಲಿ ಇವೆ. 2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ ಎಂದರು.
ಜಾನಪದ ವಿಶ್ವವಿದ್ಯಾಲಯದಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆದಿದೆ. ಸಚಿವ ಸಂಪುಟದ ಉಪಸಮಿತಿಯನ್ನೂ ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಟಿ ಮಾಡಲಾಗಿದೆ. ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ ಎಂದರು.




