ಬೆಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮಾರ್ಪಡಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಬಿಜಿ ರಾಮ್ ಜಿ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಇದೀಗ ಈ ಬಗ್ಗೆ ಚರ್ಚೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಸಿದ್ಧತೆ ನಡೆಸಿದೆ. ಜನವರಿ ಕೊನೆಯ ವಾರದಲ್ಲಿ ಎರಡು ದಿನಗಳ ಕಾಲ ಪ್ರತ್ಯೇಕವಾಗಿ ಈ ಎರಡು ಮಸೂದೆಗಳ ಬಗ್ಗೆ ಚರ್ಚೆ ನಡೆಸಿ ಸಾಧಕ ಬಾಧಕಗಳನ್ನು ಸಾರ್ವಜನಿಕರ ಮುಂದೆ ಇಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ವಿಶೇಷ ಅಧಿವೇಶನ ಕರೆಯುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ಸಂಪುಟ ಅಧಿಕಾರ ನೀಡಿದೆ. ಉನ್ನತ ಮೂಲಗಳ ಪ್ರಕಾರ ಜನವರಿ ಕೊನೆಯ ವಾರದಲ್ಲಿ ಎರಡು ದಿನ ವಿಶೇಷ ಅಧಿವೇಶನ ನಡೆಯಲಿದ್ದು, ಕೇಂದ್ರ ಸರ್ಕಾರದ ವಿಬಿಜಿ ರಾಮ್ ಜಿ ಕಾನೂನಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರ ಪ್ರತ್ಯೇಕ ಕಾನೂನು ರಚನೆ ಮಾಡುವ ಕುರಿತಂತೆ ಚರ್ಚೆ ನಡೆಸಲಿದೆ ಎಂದು ಗೊತ್ತಾಗಿದೆ.




