ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಚಕ್ರ ತುಕ್ಕು ಹಿಡಿದು ನಿಂತಿದೆ. ಕನಿಷ್ಠ ಶಿಕ್ಷಣ ಕ್ಷೇತ್ರಕ್ಕಾದರೂ ಅಲ್ಪವಾದರೂ ಕಾಯಕಲ್ಪ ನೀಡದ ನಿಷ್ಕ್ರೀಯತೆ ಪ್ರದರ್ಶಿಸಲಾಗುತ್ತಿದೆ ಎಂಬುದಕ್ಕೆ ಶಾಲಾ ಕೊಠಡಿಗಳಿಗಾಗಿ ಮಕ್ಕಳ ಶಿಕ್ಷಣದ ಪರ ಕಾಳಜಿಪೂರ್ವಕ ಪ್ರತಿಭಟನೆ ನಡೆಸಿದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತ್ತು ಮಾಡಿ ಸರ್ಕಾರ ತನ್ನ ಕ್ರೌರ್ಯತನ ಮೆರದಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಕೊರತೆಯ ಕುರಿತು ನಿರಂತರ ನಿವೇದನೆ ಸಲ್ಲಿಸಿ ಇದು ನಿರರ್ಥಕವಾದಾಗ ಗತ್ಯಂತರವಿಲ್ಲದೇ ವೀರಣ್ಣ ಮಡಿವಾಳರ ಅವರು ಸರ್ಕಾರದ ಕಣ್ಣು ತೆರೆಸಲು ಶಿಕ್ಷಣ ಕಳಕಳಿಯ ಪ್ರತೀಕವಾಗಿ ಸಾತ್ವಿಕ ಪ್ರತಿಭಟನೆ ತೋರಿಸಿದ್ದಾರೆ, ಇದನ್ನು ಅಶಿಸ್ತು ಎಂದು ಪರಿಗಣಿಸಿ ಅವರನ್ನು ಸೇವೆಯಿಂದ ಅಮಾನತ್ತು ಪಡಿಸುವ ಕಠಿಣ ನಿರ್ಧಾರದ ಮೂಲಕ ಶಿಕ್ಷಣದಲ್ಲಿ ಸುಧಾರಣೆ ತರುವ ಸಮರ್ಪಣಾ ಮನೋಭಾವದ ಬದ್ಧತೆಯ ಶಿಕ್ಷಕರನ್ನು ಕಾಂಗ್ರೆಸ್ ಸರ್ಕಾರ ಶಿಕ್ಷಿಸಲು ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇದು Indian National Congress – Karnataka ಸರ್ಕಾರಕ್ಕೆ ಶಿಕ್ಷಣದ ಬಗ್ಗೆ ಇರುವ ಉಪೇಕ್ಷೆ ಹಾಗೂ ತಾತ್ಸಾರವನ್ನು ತೋರಿಸಿದೆ.
ವೀರಣ್ಣ ಮಡಿವಾಳ ಅವರ ಅಮಾನತ್ತು ಕೂಡಲೇ ಹಿಂಪಡೆದು ಸದರಿ ಶಾಲೆಗೆ ಅಗತ್ಯ ಕೊಠಡಿಗಳ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕೆಂದು ಸಂಕಲ್ಪ ತೊಟ್ಟು ಈಗಾಗಲೇ ಸದರಿ ಶಾಲೆಯ ಘನತೆಯನ್ನು ರಾಷ್ಟ್ರ ಮಟ್ಟದಲ್ಲಿ ಗಮನಸೆಳೆಯುವ ಮಟ್ಟದಲ್ಲಿ ಚಟುವಟಿಕೆಯಿಂದಿರಿಸಿರುವ ವೀರಣ್ಣ ಮಡಿವಾಳರ ಅವರನ್ನು ಸರ್ಕಾರ ಗೌರವಿಸಲಿ.
ಈ ಶಾಲೆ ದೇಶದ ಅತ್ಯತ್ತಮ ಸರ್ಕಾರಿ ಶಾಲೆಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದು ಕೊಂಡಿದೆ, ಅನೇಕ ಶಿಕ್ಷಣ ತಜ್ಞರಿಂದ ಪ್ರಶಂಸೆಗೊಳಗಾಗಿದೆ. ನಾಡಿನ ಪ್ರತಿಷ್ಠಿತ ಮಾಧ್ಯಮಗಳು ಸದರಿ ಶಾಲೆಯ ಕುರಿತು ಸಾಕ್ಷ್ಯ ಚಿತ್ರವನ್ನು ನಿರ್ಮಿಸಿವೆ, ಈ ಹಿರಿಮೆಗಳ ಹಿನ್ನಲೆಯಲ್ಲಿ ಸರ್ಕಾರ ಶಾಲೆಯ ಈ ಸಾಧನೆಯನ್ನು ಗುರುತಿಸಬೇಕಿತ್ತು, ಅಗತ್ಯ ವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕಿತ್ತು, ಅಕ್ಷರ ವಂಚಿತ ಅತೀ ಹಿಂದುಳಿದ ಸಮುದಾಯದಿಂದ ಬಂದು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಯ ಹೆಜ್ಜೆಗಳನ್ನಿಟ್ಟಿರುವ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಭಿನಂದಿಸಿ ಗೌರವಿಸ ಬೇಕಿತ್ತು, ಆದರೆ ಇದರ ಬದಲಾಗಿ ಅವರನ್ನು ಅಮಾನತ್ತುಗೊಳಿಸಿ ಶಿಕ್ಷೆ ವಿಧಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಶಿಕ್ಷಣ ವಿರೋಧಿ ನಡೆಯಾಗಿದೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ




