ದಾವಣಗೆರೆ: ಡಿಸೆಂಬರ್ 22 ರೊಳಗಾಗಿ ಸೊಪ್ಪಿನ ವ್ಯಾಪಾರಿಗಳಿಗೆ ಎ.ಪಿ.ಎಂ.ಸಿ ಮಾರ್ಕೆಟ್ಗೆ ಸ್ಥಳಾಂತರವಾಗಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ಜನವರಿ 10 ರೊಳಗೆ ಸೊಪ್ಪಿನ ವ್ಯಾಪರಿಗಳು ಎ.ಪಿ.ಎಂ.ಸಿ. ಮಾರ್ಕೇಟ್ ಗೆ ಸ್ಥಳಾಂತರವಾಗಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಹಾನಗರ ಪಾಲಿಕೆಯ ಡಾ.ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸೊಪ್ಪಿನ ಮಾರುಕಟ್ಟೆ ಸ್ಥಳಾಂತರಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಡಿಪೇಟೆ, ಚೌಕಿಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆಯಲ್ಲಿ, ವಾಯುಮಾಲಿನ್ಯ ಹಾಗೂ ಅಲ್ಲಿನ ಸ್ವಚ್ಛತೆಗೆ ತುಂಬಾ ಸಮಸ್ಯೆಯಾಗುತ್ತಿರುವ ಕಾರಣ ಮಂಡಿಪೇಟೆ ಪ್ರದೇಶದಲ್ಲಿ ಸೊಪ್ಪಿನ ವ್ಯಾಪರಿಗಳನ್ನು ಎ.ಪಿ.ಎಂ.ಸಿ ಗೆ ಸ್ಥಳಾಂತರಿಸುವುದು ಅನಿವಾರ್ಯ ಎಂದರು.
ದಾವಣಗೆರೆ ನಗರದಲ್ಲಿ ವಾಹನ ದಟ್ಟಣೆ ಹಾಗೂ ನಿಲುಗಡೆ ಸಮಸ್ಯೆ ತುಂಬಾ ಹೆಚ್ಚಾಗಿರುವ ಕಾರಣ ಇದರಿಂದ ಸಾಕಷ್ಟು ಅನಾನುಕೂಲಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು.
ನಮ್ಮ ದೇಶದಲ್ಲಿ ಶೇ. 80ರಷ್ಟು ಪೆಟ್ರೋಲ್, ಡೀಸೆಲ್ ಹೊರ ರಾಷ್ಟ್ರದಿಂದ ಬರುತ್ತದೆ. ಆ ಹೊರ ರಾಷ್ಟ್ರದಿಂದ ಪೆಟ್ರೋಲ್ ಡೀಸೆಲ್ ತೆಗೆದುಕೊಳ್ಳಬೇಕಾದರೆ ನಮ್ಮ ದುಡ್ಡನ್ನು ಕೊಟ್ಟು ಅದನ್ನು ಡಾಲರ್ಗೆ ಬದಲಾವಣೆ ಮಾಡಿ ನಾವು ತೆಗೆದುಕೊಳ್ಳಬೇಕಾಗುತ್ತದೆ. ಜನದಟ್ಟಣೆ, ವಾಹನದಟ್ಟಣೆ ಹಾಗೂ ಕಿರಿದಾದ ರಸ್ತೆಗಳ ಕಾರಣದಿಂದ ಸಂಚಾರದಟ್ಟಣೆಯಾಗುತ್ತಿದೆ. ಇದರಿಂದ ಮಾಲಿನ್ಯ, ಇಂಧನ ವ್ಯಯ ಸೇರಿದಂತೆ ದಿನನಿತ್ಯ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಇದಕ್ಕೆಲ್ಲಾ ಪರಿಹಾರವಾಗಿ ಸ್ಥಳಾಂತರ ಮಾಡಬೇಕಾಗಿದೆ. ವ್ಯಾಪಾರಸ್ಥರಿಗೆ ಮಳಿಗೆ ಬಾಡಿಗೆ ಹೊರೆಯಾಗದಂತೆ ಅನುಕೂಲ ಮಾಡಿ ಕೋಡುತ್ತೇವೆ ಎಂದು ಇದೇ ವೇಳೆ ವರ್ತಕರಿಗೆ ಭರವಸೆ ನೀಡಿದರು.
ಎಪಿಎಂಸಿಯಲ್ಲಿ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತದೆ. ಹಾಗೂ ಇತರೆ ವ್ಯಾಪರಿಗಳಿಗೆ ಎಲ್ಲಿ ಸೂಕ್ತವಾದ ಖಾಲಿ ಜಾಗ ಇದೆಯೋ, ಅದನ್ನು ಗುರುತಿಸಿ ಜಿಲ್ಲಾ ಸಚಿವರ ಗಮನಕ್ಕೆ ತಂದು ಅನುಕೂಲ ಮಾಡಿಕೊಡಲಾಗುವುದು. ಎ.ಪಿ.ಎಂ.ಸಿ ಮಾರ್ಕೇಟ್ ಮಳಿಗೆಗಳು ಬೇಕಾದರೆ ಕಡ್ಡಾಯವಾಗಿ ಲೈಸೆನ್ಸ್ ಪಡೆದುಕೊಳ್ಳಬೇಕು. ಹಳೆ ಲೈಸೆನ್ಸ್ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಹಬ್ಬಹರಿದಿನಗಳಲ್ಲಿ ವಾಹನ ನಿಲುಗಡೆಗೆ ತುಂಬಾ ಸಮಸ್ಯೆ ಆಗುತ್ತಿದ್ದು, ಇದನ್ನು ತಪ್ಪಿಸಲು ಸೊಪ್ಪಿನ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರ್ಕೆಟ್ ಗೆ ಬದಲಾವಣೆ ಮಾಡಲಾಗುತ್ತಿದೆ ಎಂದರು.
ಹೊಸ ಜಾಗಕ್ಕೆ ಬಂದು ಹೊಂದಿಕೊಳ್ಳುವುದು ಕಷ್ಟವಾದರೂ ನಂತರ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ಸ್ಥಳಾಂತರಿಸುವುದರಿಂದ ವಾಹನ ನಿಲುಗಡೆ, ಇತ್ಯಾದಿ ಸಮಸ್ಯೆಗಳು ಬಗೆಹರಿಯುತ್ತವೆ ಎಂದರು.
ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್. ಕೆ ಮಾತನಾಡಿ, ದಾವಣಗೆರೆ ನಗರದಲ್ಲಿ 6 ಲಕ್ಷ ಜನ, ಮನೆಗೆ ಎರಡು, ಮೂರು ವಾಹನಗಳಿರುವುದರಿಂದ ಮುಂದಿನ ದಿನಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆಗೆ ತುಂಬಾ ತೊಂದರೆಯಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ನಿಲುಗಡಿಗೆ ಸಮಸ್ಯೆಯಾಗದಂತೆ ಎಪಿಎಂಸಿ ಮಾರ್ಕೆಟ್ ಗೆ ಸ್ಥಳಾಂತರಿಸಲಾಗುವುದು. ಇದರಿಂದ ನಗರದ ಸ್ವಚ್ಚತೆ, ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಉಪ ಮೇಯರ್ ಸೋಗಿ ಶಾಂತಕುಮಾರ್, ಸದಸ್ಯ ಗಡಿಗುಡಾಳ್ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.




