ಮಂಗಳೂರು: ಹಿರಿಯ ಸಾಹಿತಿ ಡಾ.ನಾ ಡಿಸೋಜ (87), ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಮಡಿಕೇರಿಯಲ್ಲಿ ನಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರು ಇದುವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ರಚಿಸಿದ್ದಾರೆ.
ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಗಳಿಸಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದಾರೆ.
ಇವರ ‘ಮುಳುಗಡೆಯ ಊರಿಗೆ ಬಂದವರು’ ಕಿರು ಕಾದಂಬರಿಗೆ 2011ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ಸಂದಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ನವದೆಹಲಿ ಕಥಾ ಪ್ರಶಸ್ತಿ, ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ಮುಂತಾದವುಗಳಿಂದ ಇವರು ಪುರಸ್ಕೃತರಾಗಿದ್ದಾರೆ.




