ಬೆಂಗಳೂರು: ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಇತ್ತೀಚೆಗೆ ಬೆಂಗಳೂರುಳಿನ ಕೆಲವು ಕಡೆ ಕಿಡಿಗೇಡಿಗಳು ರಾತ್ರಿ ವೇಳೆ ಒಂಟಿಯಾಗಿ ತೆರಳುವ ಮಹಿಳೆಯರಿಗೆ ಕಿರುಕುಳ ನೀಡುವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುವ ಪ್ರಕರಣಗಳು ವರದಿಯಾಗುತ್ತಿದ್ದು ಅಂತವುಗಳ ಮೇಲೆ ತೀವ್ರ ನಿಗಾ ಇರಿಸುವ ಜೊತೆಗೆ ಮಹಿಳೆಯರ ರಕ್ಷಣೆಗೆ ಮುಂದಾಗಿದ್ದಾರೆ.
ರಾತ್ರಿಯ ವೇಳೆ ತೊಂದರೆಗೆ ಸಿಲುಕುವ ಮಹಿಳೆಯರ ನೆರವಿಗೆ ತುರ್ತಾಗಿ ಧಾವಿಸುವ ದೃಷ್ಟಿಯಿಂದ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ.
ರಾತ್ರಿ ವೇಳೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿರಬೇಕಾದ ಈ ಮಹಿಳಾ ಸಿಬ್ಬಂದಿ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದ್ದು, ಅಗತ್ಯವಶ್ಯದ ಕಡೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.




