ಬೆಂಗಳೂರು: ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಇತ್ತೀಚೆಗೆ ಬೆಂಗಳೂರುಳಿನ ಕೆಲವು ಕಡೆ ಕಿಡಿಗೇಡಿಗಳು ರಾತ್ರಿ ವೇಳೆ ಒಂಟಿಯಾಗಿ ತೆರಳುವ ಮಹಿಳೆಯರಿಗೆ ಕಿರುಕುಳ ನೀಡುವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುವ ಪ್ರಕರಣಗಳು ವರದಿಯಾಗುತ್ತಿದ್ದು ಅಂತವುಗಳ ಮೇಲೆ ತೀವ್ರ ನಿಗಾ ಇರಿಸುವ ಜೊತೆಗೆ ಮಹಿಳೆಯರ ರಕ್ಷಣೆಗೆ ಮುಂದಾಗಿದ್ದಾರೆ.
ರಾತ್ರಿಯ ವೇಳೆ ತೊಂದರೆಗೆ ಸಿಲುಕುವ ಮಹಿಳೆಯರ ನೆರವಿಗೆ ತುರ್ತಾಗಿ ಧಾವಿಸುವ ದೃಷ್ಟಿಯಿಂದ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ.
ರಾತ್ರಿ ವೇಳೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿರಬೇಕಾದ ಈ ಮಹಿಳಾ ಸಿಬ್ಬಂದಿ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದ್ದು, ಅಗತ್ಯವಶ್ಯದ ಕಡೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.



