ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

1 year ago

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ವತಿಯಿಂದ ಕನ್ನಡ ಭವನದ ಆವರಣದಲ್ಲಿ“ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ“ಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಅವರ ನಿಧನದಿಂದಾಗಿ ಸರಳವಾಗಿ ಆಚರಿಸಲಾಯಿತು.

ದಿನಾಚರಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾವ್ ಪಾಟೀಲ್, ಅಶೋಕ್ ಛಲವಾದಿ,  ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ಸಿಂಗ್, ಲೆಕ್ಕಾಧಿಕಾರಿ ಸುರೇಶ್ ನಾಯ್ಕ್ ಬಿ, ಕನ್ನಡ ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಮತ್ತಿತರು ಉಪಸ್ಥಿತರಿದ್ದು ವಿಶ್ವಕರ್ಮ ಅಮರಶಿಲ್ಪಿಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸಿದರು.

Leave a Reply