ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಪ್ರಿಯಾಂಕ್ ಖರ್ಗೆ

2 years ago

ಕಲಬುರ್ಗಿ: ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರುಗಳು, ಮಾಜಿ ಸಚಿವರು, ಪಕ್ಷದ ಮುಖಂಡರು ಹಾಗು ಕಾರ್ಯಕರ್ತರೊಂದಿಗೆ ನಗರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಕುರಿತು ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ, ಕಳೆದ ಐದು ವರ್ಷದಿಂದ ಕಲಬುರಗಿ ಜಿಲ್ಲೆಯು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಹಿಂದೆ ಬಿದ್ದಿದೆ. ಕಳೆದ ಬಾರಿ ಮಾಡಿದ ಒಂದು ತಪ್ಪಿನಿಂದ ಜಿಲ್ಲೆಯು ಪಡೆದುಕೊಳ್ಳುವುದಕ್ಕಿಂದ ಕಳೆದುಕೊಂಡಿದ್ದೆ ಹೆಚ್ಚು. ಈ ನಿಟ್ಟಿನಲ್ಲಿ ಈ ಬಾರಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳ ವಾಗ್ದಾನವನ್ನು ಪೂರೈಸಿ, ನುಡಿದಂತೆ ನಡೆದಿದೆ. ಬಡವರು, ಕಾರ್ಮಿಕರು ಸೇರಿದಂತೆ ಸರ್ವಜನಾಂಗದ ಅಭುದ್ಯಯಕ್ಕಾಗಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.

Leave a Reply