ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ: ಡಿ.ಕೆ.ಶಿವಕುಮಾರ್

2 years ago

ಬೆಂಗಳೂರು: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದಿದ್ದಾರೆ.

Leave a Reply