ಅಧಿಕಾರಿಗಳನ್ನ ಸರಿ ದಾರಿಗೆ ತರೋದು ಹೇಗೆ ಎಂತಲೂ ನಮಗೆ ಗೊತ್ತಿದೆ: ಕೃಷ್ಣ ಬೈರೇಗೌಡ

8 months ago

ಬೆಂಗಳೂರು: ಎಲ್ಲಾ ಅಧಿಕಾರಿಗಳೂ ತುಂಬಾ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಗೇ ಹೋದ್ರೂ ಜನ ಇಲಾಖೆಯಲ್ಲಿ ಆಗುತ್ತಿರುವ ಒಳ್ಳೆಯ ಜನಸ್ನೇಹಿ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ಅಧಿಕಾರಿಗಳ ಶ್ರಮವನ್ನು ಶ್ಲಾಘಿಸಿದರು.

ಎಲ್ಲಾ ಉಪ-ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾರೋ 10 ಪರ್ಸೆಂಟ್ ಎಸಿಗಳಿಂದ ಉತ್ತಮ ಕೆಲಸ ಮಾಡ್ತಾ ಇರೋ ಅಧಿಕಾರಿಗಳಿಗೂ ಕೆಟ್ಟ ಹೆಸರು ಬರ್ತಿದೆ ಎಂದರು.

ಅಂತಹ ಅಧಿಕಾರಿಗಳನ್ನ ಸರಿ ದಾರಿಗೆ ತರೋದು ಹೇಗೆ ಎಂತಲೂ ನಮಗೆ ಗೊತ್ತಿದೆ ಎಂದೂ ಸಭೆಯಲ್ಲೇ ಕೆಲ ಬೇಜವಾಬ್ದಾರಿ ಅಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ನೀಡಿದರು.

Leave a Reply