ಕಾಂಗ್ರೆಸ್ ಘೋಷಿಸಿರುವ 25 ಗ್ಯಾರಂಟಿ ಯೋಜನೆಗಳಲ್ಲಿ ಇರುವುದೇನು?: ನೀವೇ ನೋಡಿ ಯಾರಿಗೆ ಮತ ನೀಡಬೇಕು ನಿರ್ಧರಿಸಿ

2 years ago

ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಗೆ ಒಟ್ಟಾರೆ 25 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಅವುಗಳೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

  1. ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಯಾವುದೇ ಷರತ್ತುಗಳಿಲ್ಲದೇ ವರ್ಷಕ್ಕೆ 1 ಲಕ್ಷ ರೂ. ಹಣ ವರ್ಗಾವಣೆ
  2. ಪ್ರತೀ ತಾಲೂಕಿನಲ್ಲಿ ಒಂದು ಸರ್ಕಾರಿ ಸಮುದಾಯ ಕಾಲೇಜು, 12ನೇ ತರಗತಿವರೆಗೆ ಎಲ್ಲರಿಗೂ ಉಚಿತ, ಶೈಕ್ಷಣಿಕ ಸಾಲ ಮನ್ನಾ
  3. 10 ವರ್ಷಗಳ ಅವಧಿಯಲ್ಲಿ 23 ಕೋಟಿ ಮಂದಿಯನ್ನು ಬಡತನದಿಂದ ಮೇಲಕ್ಕೆ ಎತ್ತುವ ಭರವಸೆ
  4. ಜಾತಿ/ಉಪಜಾತಿಗಳ ಹಾಗೂ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಅರಿಯಲು ದೇಶದಾದ್ಯಂತ ಜಾತಿಗಣತಿಯನ್ನು ನಡೆಸುವುದು
  5. 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿ ಡಿಪ್ಲೊಮಾ, ಪದವೀಧರೆನಿಗೆ ವರ್ಷಕ್ಕೆ 1 ಲಕ್ಷ ರೂ. ಜತೆಗೆ ಅಪ್ರೆಂಟಿಷಿಪ್. ಇದಕ್ಕಾಗಿ ಅಪ್ರೆಂಟಿಷಿಫ್ ಕಾಯಿದೆ ಜಾರಿ
  6. ಆರೋಗ್ಯ ರಕ್ಷಣೆಗಾಗಿ ರಾಜಸ್ಥಾನ ಮಾದರಿಯಲ್ಲಿ 25 ಲಕ್ಷ ರೂ.ವರೆಗೆ ನಗದು ರಹಿತ ವಿಮಾ ಯೋಜನೆ ದೇಶಾದ್ಯಂತ ಜಾರಿಗೆ ಸಂಕಲ್ಪ
  7. ಜಮ್ಮು-ಕಾಶ್ಮೀರ, ಪುದುಚೆರಿಗೆ ರಾಜ್ಯದ ಸ್ಥಾನಮಾನ ನೀಡಲಾಗುವುದು
  8. ನಗರ ಪ್ರದೇಶಗಳ ಬಡವರಿಗೆ ಉದ್ಯೋಗ ಖಾತರಿ ಯೋಜನೆ ಜಾರಿ
  9. ವಿವಿಧ ಹಂತಗಳ ಕೇಂದ್ರ ಸರ್ಕಾರದ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ
  10. 2025ರಿಂದ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲು
  11. ರಾಷ್ಟ್ರೀಯ ಕನಿಷ್ಠ ಕೂಲಿ ಅನುಸಾರ, 11 ಎಂ-ನರೇಗಾ ಯೋಜನೆಯಡಿ ದಿನಗೂಲಿ ಮೊತ್ತವನ್ನು 400 ರೂ.ಗೆ ಹೆಚ್ಚಿಸುವುದು
  12. ಬಡವರ ಹಿತ ರಕ್ಷಿಸಲು ಜಿಎಸ್ಟಿ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆ
  13. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಲು ಸಾಂವಿಧಾನಿಕ ಕಾನೂನು ತಿದ್ದುಪಡಿ ತರುವುದು
  14. ಎಲ್ಲಾ ಜಾತಿ ಮತ್ತು ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಒದಗಿಸಲಾಗುವುದು
  15. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ನೀಡುವುದು. ಕೃಷಿ ಬೆಲೆ ಮತ್ತು ದರ ಆಯೋಗ ಸ್ವಾಯತ್ತ ಸಂಸ್ಥೆಯಾಗಿ ಮಾರ್ಪಾಡು
  16. ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ರಾಜ್ಯ ಸ್ಥಾನಮಾನವನ್ನು ತಕ್ಷಣವೇ ಮರುಸ್ಥಾಪಿಸುವುದು
  17. ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸುವುದು. ಮೊದಲಿನಂತೆ ಸಶಸ್ತ್ರಪಡೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಂದುವರಿಕೆ.
  18. ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ನಿಯಮಿತ ಉದ್ಯೋಗಗಳ ಗುತ್ತಿಗೆಯನ್ನು ರದ್ದುಗೊಳಿಸುವುದು. ಅಂತಹ ನೇಮಕಾತಿಗಳನ್ನು ಕ್ರಮಬದ್ಧಗೊಳಿಸುವುದನ್ನು ಖಚಿತಪಡಿಸುವುದು
  19. ಕೇಂದ್ರ ಸರ್ಕಾರದಲ್ಲಿ ವಿವಿಧ ಹಂತಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಸುಮಾರು 30 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು
  20. ಸರ್ಕಾರಿ ಉದ್ಯೋಗಗಳು ಹಾಗೂ ಪರೀಕ್ಷೆಗಳ ಅರ್ಜಿ ಶುಲ್ಕಗಳ ರದ್ದು
  21. ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮದಡಿ (ಎನ್ಎಸ್ಎಪಿ) ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲ ವ್ಯಕ್ತಿಗಳ ಪಿಂಚಣಿಗೆ ಕೇಂದ್ರವು ನೀಡುವ 200-500 ರೂ. ನೆರವಿನ ಮೊತ್ತವನ್ನು ₹1,000ಕ್ಕೆ ಏರಿಸಲಾಗುವುದು
  22. 21 ವರ್ಷ ಒಳಗಿನ ಪ್ರತಿಭಾವಂತ ಮತ್ತು ಉದಯೋನ್ಮುಖ ಕ್ರೀಡಾಪಟುಗಳಿಗೆ ತಿಂಗಳಿಗೆ ₹10,000 ಕ್ರೀಡಾ ವಿದ್ಯಾರ್ಥಿವೇತನ ನೀಡುವುದು
  23. ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ. ಮಹಿಳೆಯರಿಗೆ ಮೂರನೇ ಒಂದು ಭಾಗದ ಮೀಸಲಾತಿಯು 2029ರಲ್ಲಿ ಚುನಾಯಿತವಾಗುವ ಲೋಕಸಭೆಗೂ ಅನ್ವಯಿಸುತ್ತದೆ
  24. ಮೀನುಗಾರರ ಸಮುದಾಯಗಳಿಗೆ ಡೀಸೆಲ್ ಸಬ್ಸಿಡಿ ಮರುಸ್ಥಾಪನೆ. ಮೀನುಗಾರಿಕೆ ವೇಳೆ ಮೃತರೆಂದು ದೃಢವಾದರೆ ಮೀನುಗಾರರಿಗೆ ಮೂರು ತಿಂಗಳೊಳಗೆ ಪ್ರಮಾಣ ಪತ್ರ ವಿತರಣೆ
  25. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಆಕ್ಟ್ 1978ಕ್ಕೆ ತಿದ್ದುಪಡಿ. ಮಾಧ್ಯಮ ಸ್ವಯಂ ನಿಯಂತ್ರಣ ವ್ಯವಸ್ಥೆ ಬಲಪಡಿಸಲು, ಪತ್ರಿಕೋದ್ಯಮ ಸ್ವಾತಂತ್ರ್ಯ ರಕ್ಷಿಸಲು, ಸಂಪಾದಕೀಯ ಸ್ವಾತಂತ್ರ್ಯ ಎತ್ತಿಹಿಡಿಯಲು ಮತ್ತು ಸರ್ಕಾರದ ಹಸ್ತಕ್ಷೇಪದಿಂದ ರಕ್ಷಿಸಲು ಕ್ರಮ

Leave a Reply