ಬಿಜೆಪಿ ನಾಯಕರೇ ಯಾವಾಗ ರಾಜೀನಾಮೆ ನೀಡುತ್ತೀರಿ?: ಪ್ರಿಯಾಂಕ್ ಖರ್ಗೆ

1 year ago

ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸೋಲಿಗೆ ಸಾವರ್ಕರ್ ಕಾರಣ ಎಂಬುವುದನ್ನು ಸಾಬೀತುಪಡಿಸುವ ದಾಖಲೆಯನ್ನು ನಾವು ಸದನದಲ್ಲಿ ಹಾಜರುಪಡಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಸವಾಲು ಹಾಕಿದ್ದರು.

ಜನವರಿ 18, 1952ರಂದು, ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಪರಿಚಯಸ್ಥರಿಗೆ ಪತ್ರ ಬರೆದು, ವಿನಾಯಕ ದಾಮೋದರ್ ಸಾವರ್ಕರ್ ತಮ್ಮ ಚುನಾವಣಾ ಸೋಲಿನಲ್ಲಿ ಹೇಗೆ ಪಾತ್ರ ವಹಿಸಿದ್ದರು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.

ತಮ್ಮ ಪತ್ರದಲ್ಲಿ, ಡಾ. ಅಂಬೇಡ್ಕರ್ ಅವರು ಸಾವರ್ಕರ್ ತಮ್ಮ ಸೋಲಿಗೆ ಕಾರಣವೆಂದು ಭಾವಿಸಿದ ಅಂಶಗಳನ್ನು ವಿವರಿಸಿದ್ದರು ಮತ್ತು ಅದರಲ್ಲಿ ಸಾವರ್ಕರ್ ಅವರ ಪ್ರಭಾವ ಮತ್ತು ರಾಜಕೀಯ ತಂತ್ರವನ್ನು ತಮ್ಮ ಪತ್ರದಲ್ಲಿ ಎತ್ತಿ ತೋರಿಸಿದ್ದರು.

ಆ ಪತ್ರ ಇಲ್ಲಿದೆ. BJP Karnataka ನಾಯಕರೇ ಯಾವಾಗ ರಾಜೀನಾಮೆ ನೀಡುತ್ತೀರಿ?

– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ

Leave a Reply