ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜು ಬಂಧನ ಯಾವಾಗ? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
#RCB ಐಪಿಎಲ್ ಗೆಲುವಿಗಾಗಿ ವಿಧಾನಸೌಧದ ಬಳಿ ಆಟಗಾರರಿಗೆ ಸನ್ಮಾನ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜ್ ಪೊಲೀಸರ ಮೇಲೆ ಒತ್ತಡ ಹೇರಿ 2 ಕಡೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಿದ್ದರು.
ಕಾಲ್ತುಳಿತ ಘಟನೆಯಲ್ಲಿ 11 ಅಮಾಯಕರು ಮೃತರಾದ ಬಳಿಕ ಸಿಎಂ Siddaramaiah ಅವರು, ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ವಜಾಗೊಳಿಸಿ “ಕೈ” ತೊಳೆದುಕೊಂಡಿದ್ದಾರೆ. ಆದರೆ, ದುರಂತಕ್ಕೆ ಪ್ರಮುಖ ಕಾರಣ ಹಾಗೂ ಸೂತ್ರಧಾರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರನ್ನು ಬಂಧಿಸಬೇಕು ಮತ್ತು ಅವರ ಪಾತ್ರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಹ ಸಲ್ಲಿಸಲಾಗಿದೆ.
– ಜೆಡಿಎಸ್




