35 ಕೋಟಿ ರೂ. ವೆಚ್ಚದಲ್ಲಿ ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರೆಗಿನ ರಸ್ತೆಗೆ ವೈಟ್ ಟಾಪಿಂಗ್
ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಮತ್ತು ಸಂಚಾರಿ ಪೊಲೀಸ್ ವಿಭಾಗದ ಸಮನ್ವಯತೆಯಿಂದ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣ: ಎಸ್.ಸುರೇಶ್ ಕುಮಾರ್
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲನೆಯನ್ನು ಮಾಜಿ ಸಚಿವ ಸುರೇಶ್ ಕುಮಾರ್ ನಡೆಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಎಸ್.ಸುರೇಶ್ ಕುಮಾರ್ ಅವರೊಂದಿಗೆ ಬೆಸ್ಕಾಂ, ಬಿಬಿಎಂಪಿ ಜಲಮಂಡಳಿ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಕಾಮಗಾರಿಗಳ ಪರಿಶೀಲನೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್, ಸರಿ ಸುಮಾರು 2.2 ಕಿಲೋ ಮೀಟರ್ ಉದ್ದದ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ರಸ್ತೆ ಮುಗಿದ ಮೇಲೆ ರಸ್ತೆ ಅಗೆಯುವ ಪ್ರಮೇಯ ಬರಬಾರದು. ಆದ್ದರಿಂದ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ, ಸಂಚಾರ ಪೊಲೀಸ್ ವಿಭಾಗದ ಜೊತೆಯಲ್ಲಿ ಸಮನ್ವಯ ಸಾಧಿಸಿ ಕಾಮಗಾರಿಯನ್ನು ಶರವೇಗದಲ್ಲಿ ಮುಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸರಿ ಸುಮಾರು 35 ಕೋಟಿ ರೂಪಾಯಿ ವೆಚ್ಚ. ಅದರಲ್ಲಿ 27 ಕೋಟಿ ರೂಪಾಯಿ ರಸ್ತೆ ನಿರ್ಮಾಣ, 7 ಕೋಟಿ ರೂಪಾಯಿ ಜಲಮಂಡಳಿ, ಬೆಸ್ಕಾಂ ಸಂಚಾರ ವಿಭಾಗಕ್ಕೆ ವೆಚ್ಚವಾಗಲಿದೆ. ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶದ್ವಾರ ಸಾವಿರಾರು ವಾಹನ ಸಂಚಾರಿ ಮಾಡುತ್ತವೆ. ಸಂಚಾರಕ್ಕೆ ಅಡಚಣೆಯಾಗದಂತೆ ಕಾಮಗಾರಿ ಮುಗಿಸಲು ಚರ್ಚಿಸಲಾಗಿದೆ. ರಾಜಾಜಿನಗರ 50ನೇ ಅಡ್ಡರಸ್ತೆ ಹೈಟೆಕ್ ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಮಳೆ ನಿಂತ ನಂತರ ಡಾಂಬರೀಕರಣ ಕಾಮಗಾರಿ ಮಾಡಲಾವುದು ಎಂದರು.
ಮಂಡಲದ ಅಧ್ಯಕ್ಷ ಸುದರ್ಶನ್, ಬಿಜೆಪಿ ಮುಖಂಡರಾದ ಕಾಮಧೇನು ಸುರೇಶ್, ಯಶಸ್ ನಾಯಕ್, ಪ್ರವೀಣ್, ವಿಶ್ವನಾಥ, ಪುಟ್ಟ, ಗೌತಮ್ ಮೊದಲಾದವರು ಹಾಜರಿದ್ದರು.












