ಪಂಚಮಸಾಲಿ ಹೋರಾಟ: ವಿಪಕ್ಷ ಆಡಳಿತ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ
ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ನಡೆಸಿರುವುದನ್ನು ಚರ್ಚೆ ನಡೆಸುವ ಸಂಬಂಧ ವಿಪಕ್ಷ ಆಡಳಿತ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲವುಂಟಾದಾಗ ವಿಧಾನಸಭೆಯ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಾಜಿ ಶಾಸಕರಾದ ಆರ್.ನಾರಾಯಣ, ಜಯಣ್ಣ ಅವರ ಸಂತಾಪ ಸೂಚಕ ಬಳಿಕ ಪ್ರಶ್ನೋತ್ತರವನ್ನು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕೈಗೆತ್ತಿಕೊಳ್ಳಲು ಮುಂದಾದರು.
ಕೂಡಲೇ ಎದ್ದು ನಿಂತ ವಿಪಕ್ಷ ನಾಯಕ ಆರ್.ಅಶೋಕ್, ಸದನ ನಡೆಯುವಾಗಲೇ ಪ್ರತಿಭಟನಾನಿರತ ಪಂಚಮಸಾಲಿಗಳ ಮೇಲೆ ಪೊಲೀಸ್ ಲಾಠಿ ಪ್ರಹಾರ ಮಾಡಿ ದೌರ್ಜನ್ಯ ನಡೆಸಿದೆ, ಮುಖ್ಯಮಂತ್ರಿಗಳು ದುರಹಂಕಾರದ ವರ್ತನೆ ತೋರಿದ್ದಾರೆ ಮೊದಲು ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೊಡಿ ಎಂದರು.
ಪ್ರಶ್ನೋತ್ತರ ಬಳಿಕ ಪಂಚಮಸಾಲಿ ಲಾಠಿ ಚಾರ್ಜ್ ವಿಷಯ ಕುರಿತು ಅರ್ಧಗಂಟೆಯ ಚರ್ಚೆಗೆ ಅವಕಾಶ ಮಾಡಿಕೊಡುವೆ ಎಂದು ಹೇಳಿದಾಗ ಆಡಳಿತ ಪಕ್ಷದ ಸದಸ್ಯರು ಪ್ರಶ್ನೋತ್ತರ ಅವಕಾಶಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದರು.
ಸದನ ನಡೆಯುವಾಗಲೇ ಪ್ರತಿಭಟನಾನಿರತ ಪಂಚಮಸಾಲಿಗಳ ಮೇಲೆ ಪೊಲೀಸ್ ಲಾಠಿ ಪ್ರಹಾರ ಮಾಡಿ ದೌರ್ಜನ್ಯ ನಡೆಸಿದೆ. ಸ್ವಾಮೀಜಿಯನ್ನು ಬಂಧಿಸಲಾಗಿದೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಲು ಮೊದಲು ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಿ ಎಂದು ಆಶೋಕ್ ಏರುಧ್ವನಿಯಲ್ಲಿ ಒತ್ತಾಯಿಸಿದರು.
ಸದನ ನಡೆಯುವಾಗ ಲಾಠಿ ಪ್ರಹಾರ ನಡೆದಾಗ ಗೃಹ ಸಚಿವರು ಹೇಳಿಕೆ ನೀಡಬೇಕಲ್ಲ. ಸ್ವಾಮೀಜಿ ಮೇಲೆ ದೌರ್ಜನ್ಯ ನಡೆದಿದೆ. ಅದರ ಬಗ್ಗೆ ಉತ್ತರ ನೀಡಿ ಎಂದಾಗ ಸುನೀಲ್ ಕುಮಾರ್ ಸರ್ಕಾರದ ದುರಹಂಕಾರದ ವರ್ತನೆ ಮಾಡಿದೆ ಎಂದು ತರಾಟೆಗೆ ತೆಗೆದುಕೊಂಡರು.
ಇದರಿಂದ ಆಡಳಿತ ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಉಂಟಾದಾಗ ಸದನವನ್ನು ಕೆಲಕಾಲ ಸಭಾಧ್ಯಕ್ಷ ಯೂ ಟಿ ಖಾದರ್ ಮುಂದೂಡಿದರು.




